ಬೆಂಗಳೂರು: ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯನಗರದಲ್ಲಿ ಮಳೆಯಾಗಲಿದೆ.
ಪಣಂಬೂರು, ಮಾಣಿ, ಕೃಷ್ಣರಾಜಪೇಟೆ, ಪುತ್ತೂರು, ನಾಪೋಕ್ಲು, ಉಪ್ಪಿನಂಗಡಿ, ಕನಕಪುರ, ತಿಪಟೂರು, ಹಿರೇಕೆರೂರು, ಆಗುಂಬೆ, ಕಳಸ, ಮೂಡಿಗೆರೆ, ಕೊಟ್ಟಿಗೆಹಾರ, ಕೊಪ್ಪ, ಬೇಲೂರು, ಬೆಳ್ಳೂರು, ಭದ್ರಾವತಿ, ಗೇರುಸೊಪ್ಪ, ಬನವಾಸಿ, ಬೆಳ್ತಂಗಡಿ, ಧರ್ಮಸ್ಥಳ, ಕದ್ರಾ, ಗುತ್ತಲ್, ಹಿಡಕಲ್, ಚನ್ನರಾಯಪಟ್ಟಣ, ಎಚ್ಡಿ ಕೋಟೆ, ಕುಶಾಲನಗರ, ಕುಣಿಗಲ್, ತ್ಯಾಗರ್ತಿ, ಗುಂಡ್ಲುಪೇಟೆಯಲ್ಲಿ ಮಳೆಯಾಗಿದೆ.
ಕಾರವಾರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 18.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.