ಸುದ್ದಿ

ಸಿ.ಪಿ.ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಗೆ ಬರಮಾಡಿಕೊಂಡ ಡಿಕೆಶಿ

Share It

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್​​ ಸಮ್ಮುಖದಲ್ಲಿ ಯೋಗೇಶ್ವರ್​ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿಪಿ ಯೋಗೇಶ್ವರ್ ಅವರಿಗೆ ಡಿ.ಕೆ ಶಿವಕುಮಾರ್​​ ಮತ್ತು ಡಿ.ಕೆ ಸುರೇಶ್ ಅವರು ಪಕ್ಷದ ಭಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಮೂಲಕ ಯೋಗೇಶ್ವರ್ ಅವರು ಕಾಂಗ್ರೆಸ್ ನಿಂದ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ.

ಕಾಂಗ್ರೆಸ್ ಸೇರ್ಪಡೆಗೆ ಇನ್ನೇನು ಕೆಲವೇ ನಿಮಿಷಗಳು ಬಾಕಿ ಇರುವಾಗಲೇ ಬಿಜೆಪಿ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ ನೀಡಿದ್ದಾರೆ. ವಾಟ್ಸಾಪ್​ ಮೂಲಕ ರಾಜೀನಾಮೆ ಪತ್ರವನ್ನು ರವಾನಿಸಿದ್ದು, ಈ ದಿನ ನಾನು ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ.

ದಯವಿಟ್ಟು ನನ್ನ ರಾಜೀನಾಮೆ ಸ್ವೀಕರಿಸಬೇಕೆಂದು ಕೋರುತ್ತೇನೆ. ಇಲ್ಲಿಯವರೆಗೆ ನನಗೆ ತಾವು ನೀಡಿದ ಸಹಕಾರಕ್ಕಾಗಿ ವಂದನೆಗಳು ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.


Share It

You cannot copy content of this page