ಗೋ ಬ್ಯಾಕ್ ಮುಖ್ಯಮಂತ್ರಿ ಚಳವಳಿ: ಬಿಜೆಪಿ ಮುಖಂಡರನ್ನು ಬಂಧಿಸಿದ ಪೊಲೀಸರು

Share It

ಮೈಸೂರು: ಮುಡಾ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದ ರಾಮಸ್ವಾಮಿ ವೃತ್ತದಲ್ಲಿ ‘ಗೋ ಬ್ಯಾಕ್ ಮುಖ್ಯಮಂತ್ರಿ ಚಳವಳಿ ನಡೆಸಿದರು.

ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನಾಕಾರರು ಜಮಾಯಿಸುತ್ತಿದ್ದಂತೆ ಪೊಲೀಸರು ಬಂಧಿಸಲು ಯತ್ನಿಸಿದರು. ಈ ವೇಳೆ ಪೊಲೀಸ್ ಅಧಿಕಾರಿಗಳು ಹಾಗೂ ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿ ನಡೆಯಿತು.

ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಪ್ರತಿಭಟನಾಕಾರರ ವಾಹನವನ್ನು ಕೂಡ ಸೀಜ್ ಮಾಡಿದರು. ಪ್ರತಿಭಟನೆ ವೇಳೆ ಪೊಲೀಸರು ಹಾಗೂ ಶಾಸಕ ಶ್ರೀವತ್ಸ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.


Share It

You May Have Missed

You cannot copy content of this page