ದಲಿತ ಮಹಿಳೆ ಕೊಲೆ ಪ್ರಕರಣ: 21 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Share It

ತುಮಕೂರು: 2010ರಲ್ಲಿ ತುಮಕೂರು ಜಿಲ್ಲೆಯ ಗೋಪಾಲಪುರ ಗ್ರಾಮದಲ್ಲಿ ನಡೆದಿದ್ದ ದಲಿತ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​ 21 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

2010ರ ಜೂನ್ 28ರಂದು ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ಡಾಬಾ ಹೊನ್ನಮ್ಮ ಎಂಬ ದಲಿತ ಮಹಿಳೆ ಕೊಲೆಯಾಗಿದ್ದು, ಇದೀಗ 14 ವರ್ಷಗಳ ಬಳಿಕ ಒಂದೇ ಗ್ರಾಮದ ಬರೋಬ್ಬರಿ 21 ಆರೋಪಿಗಳಿಗೆ ತುಮಕೂರು 3ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿ ತಲಾ ಒಬ್ಬ ಆರೋಪಿಗೆ 13,500 ರೂಪಾಯಿ ದಂಡ ವಿಧಿಸಿದೆ

2010ರ ಜೂನ್ 28ರಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ಡಾಬಾ ಹೊನ್ನಮ್ಮ ಎಂಬ ದಲಿತ ಮಹಿಳೆಯನ್ನು ಸವರ್ಣೀಯರು ಚಪ್ಪಡಿ ಕಲ್ಲು ಎತ್ತಿಹಾಕಿ ಕೊಲೆ‌ ಮಾಡಿದ್ದರು. ಈ ಸಂಬಂಧ ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಒಟ್ಟು 27 ಜನರ ಮೇಲೆ ಆರೋಪಿಗಳ ವಿರುದ್ಧ ಕೊಲೆ ಹಾಗೂ ಜಾತಿನಿಂದನೆ ಕೇಸ್ ದಾಖಲಾಗಿತ್ತು.

ಬಳಿಕ ಅಂದಿನ ಡಿವೈಎಸ್ ಪಿ.ಶಿವರುದ್ರಸ್ವಾಮಿ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶಿಟ್ ಸಲ್ಲಿಸಿದ್ದು, ಆರೋಪ ಆರೋಪ ಸಾಬೀತಾಗಿದೆ. ನಂತರ ವಿಚಾರಣೆ ನಡೆಸಿದ ತುಮಕೂರಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಧೀಶ ನಾಗಿರೆಡ್ಡಿ ಅವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಜೊತೆ ದಂಡ ಹಾಕಿದ್ದಾರೆ.

ಸದ್ಯ 27 ಜನ ಆರೋಪಿಗಳ ಪೈಕಿ 6 ಜನ ಮೃತಪಟ್ಟಿದ್ದರಿಂದ 21 ಆರೋಪಿಗಳಿಗೆ ಶಿಕ್ಷೆಯಾಗಿದೆ. 21 ಜನರಲ್ಲಿ ಇಬ್ಬರು ಮಹಿಳೆಯರು, 19 ಜನ ಪುರುಷ ಆರೋಪಿಗಳು.


Share It

You May Have Missed

You cannot copy content of this page