ಸುದ್ದಿ

ಆನೆ ಸೆರೆ ಕಾರ್ಯಾಚರಣೆ ವೇಳೆ ಅವಘಡ : ಮರ ಏರಿ ತಪ್ಪಿಸಿಕೊಂಡ ಇಟಿಎಫ್ ಸಿಬ್ಬಂದಿ

Share It

ಚಿಕ್ಕಮಗಳೂರು: ಆನೆ ಸೆರೆ ಹಿಡಿಯಲು ನಡೆಯುತ್ತಿದ್ದ ಕಾರ್ಯಾಚರಣೆ ವೇಳೆ ಸಿಬ್ಬಂದಿಯೊಬ್ಬರು ಅಪಾಯಕ್ಕೆ ಸಿಲುಕಿಕೊಂಡಿದ್ದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಅರಣ್ಯ ಪ್ರದೇಶದ ಸಾಲೂರು ಬಳಿ ಆನೆಯನ್ನು ಸೆರೆಹಿಡಿಯಲು ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈ ವೇಳೆ ಆನೆ ದಾಳಿಯಿಂದ ಸ್ವಲ್ಪದರಲ್ಲೇ ಸಿಬ್ಬಂದಿ ಪಾರಾಗಿದ್ದಾರೆ.

ಸಾಲೂರು ಬಳಿ ಸಲಗವೊಂದು ಮೂವರನ್ನು ಬಲಿ ಪಡೆದಿದೆ. ಹೀಗಾಗಿ, ತೋಟಕ್ಕೆ ಬಂದಿದ್ದ ಕಾಡಾನೆ ಓಡಿಸುವ ಕಾರ್ಯಾಚರಣೆ ನಡೆಯುತ್ತಿತ್ತು. ಆಗ ಸಲಗ ಏಕಾಏಕಿ ಸಿಬ್ಬಂದಿಯ ಕಡೆಗೆ ನುಗ್ಗಿಬಂದಿದ್ದು, ಕೂದಲೆಳೆ ಅಂತರದಲ್ಲಿ ಇಟಿಎಫ್ ಸಿಬ್ಬಂದಿ ಬಚಾವಾಗಿದ್ದಾರೆ.


Share It

You cannot copy content of this page