ಉಪಯುಕ್ತ ಸುದ್ದಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಡಿಗೆ ಮತ್ತೆ 3 ರಾಷ್ಟ ಮಟ್ಟದ ಪ್ರಶಸ್ತಿ

Share It

ಬೆಂಗಳೂರು: ದೇಶದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ 2023-24 ನೇ ಸಾಲಿನ ಒಟ್ಟು ಮೂರು ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪಡೆದುಕೊಂಡಿದೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ವ್ಯಾಪ್ತಿಯಲ್ಲಿ ದೇಶದ 62 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಸದಸ್ಯತ್ವ ಹೊಂದಿವೆ. ಸದರಿ ಒಕ್ಕೂಟವು 13 ನೇ ಆಗಸ್ಟ್ 1965 ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಭಾರತ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ನಿರ್ದೇಶನದ ಅನುಸಾರ ಕಾರ್ಯನಿರ್ವಹಿಸುತ್ತದೆ. ಈ ಸಂಸ್ಥೆ 59 ವರ್ಷಗಳ ಅನುಭವ ಹೊಂದಿದ್ದು, ದೇಶದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ.

ಕೆಎಸ್‌ಆರ್‌ಟಿಸಿಗೆ ಅಶ್ವಮೇಧ ಬ್ರ‍್ಯಾಂಡಿAಗ್ ಹಾಗೂ ವರ್ಚಸ್ಸು ಅಭಿವೃದ್ಧಿ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಯೋಜನೆಗಳು ಹಾಗೂ ಗಣಕೀಕರಣ ಉಪಕ್ರಮಗಳಿಗಾಗಿ ಮೂರು ಪ್ರಶಸ್ತಿಗಳು ಲಭಿಸಿರುತ್ತದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ವತಿಯಿಂದ ನವದೆಹಲಿಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ನಿವೃತ್ತ ಐಪಿಎಸ್ ಡಾ. ಕಿರಣ್ ಬೇಡಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು.

ಈ ಸಂದರ್ಭದಲ್ಲಿ ಪ್ರಿಯಾಂಗ, ವ್ಯವಸ್ಥಾಪಕ ನಿರ್ದೇಶಕರು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಸೂರ್ಯಕಿರಣ್, ನಿರ್ವಾಹಕ ನಿರ್ದೇಶಕರು, ಎಎಸ್‌ಆರ್‌ಟಿಯು ಉಪಸ್ಥಿತರಿದ್ದು ಗುರುರಾಜ ಹೆಚ್, ಉಪಮುಖ್ಯ ಸಂಚಾರ ವ್ಯವಸ್ಥಾಪಕರು ಹಾಗೂ ಶ್ರೀಮತಿ ರಾಧ, ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ಅವರು ನಿಗಮದ ಪರವಾಗಿ ಪ್ರಶಸ್ತಿಗಳನ್ನು ಸ್ವೀಕರಿಸಿದರು.

ಇದೆ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಸುಲೋಚನಾ ದೇವಿ ಚಾಲಕ ಕಂ ನಿರ್ವಹಕಿ, ಆನೇಕಲ್ ಘಟಕ ಅವರಿಗೆ ಸಾರಿಗೆ ಸಂಸ್ಥೆಯಲ್ಲಿ ಸಲ್ಲಿಸಿರುವ 26 ವರ್ಷಗಳ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.


Share It

You cannot copy content of this page