ಬೆಂಗಳೂರು: ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂದು ಸಚಿವ ಕೆ.ಎನ್ ರಾಜಣ್ಣ ಸದನದಲ್ಲಿ ಹೇಳಿಕೆ ನೀಡಿ ಸಂಚಲನ ಸೃಷ್ಟಿಸಿದೆ.
ಈ ವಿವಾದ ರಾಜ್ಯ ಕಾಂಗ್ರೆಸ್ನಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಮಧ್ಯೆ ಖುದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಸಿಎಂ ಸಿದ್ದರಾಮಯ್ಯನವರನ್ನು ಇಂದು ಬೆಳಗ್ಗೆ ಭೇಟಿಯಾಗಿದ್ದಾರೆ.
ಇಂದು (ಮಾರ್ಚ್ 23) ಬೆಂಗಳೂರಿನ ಸಿಎಂ ನಿವಾಸ ಕಾವೇರಿಗೆ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದರು. ಹನಿಟ್ರ್ಯಾಪ್ ಬಿರುಗಾಳಿ ಬೆನ್ನಲ್ಲೇ ಸ್ವತಃ ಖರ್ಗೆ ಅವರೇ ದೆಹಲಿಯಿಂದ ಬೆಂಗಳೂರಿಗೆ ಬಂದು ಸಿಎಂ ಭೇಟಿ ಮಾಡಿರುವುದು ಇದೀಗ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಖರ್ಗೆ ಅವರು ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಸಿಎಂ ಸಿದ್ದರಾಮಯ್ಯ ಶೀಘ್ರದಲ್ಲೇ ಮೊಣಕಾಲು ನೋವಿನಿಂದ ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಖರ್ಗೆ ಅವರು ಶುಭ ಹಾರೈಸಿದ್ದಾರೆ. ಅಲ್ಲದೇ ಇದೇ ನೆಪದಲ್ಲಿ ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಅವರ ಹನಿಟ್ರ್ಯಾಪ್ ಆರೋಪದ ಬಗ್ಗೆ ಸಿಎಂ ಜೊತೆಗೆ ಖರ್ಗೆ ಅವರು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ದೇಶಾದ್ಯಂತ ಸದ್ದು ಮಾಡಿರುವ ಹನಿಟ್ರ್ಯಾಪ್ ವಿಚಾರದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಂದ ದೂರವಾಣಿ ಮೂಲಕ ಮಾಹಿತಿ ಪಡೆದಿದೆ. ಆದರೂ ಸಹ ಎಐಸಿಸಿ ಅಧ್ಯಕ್ಷರು ಸಿಎಂ ಅವರ ಆರೋಗ್ಯ ವಿಚಾರಿಸುವ ನೆಪದಲ್ಲಿ ಬಂದು ಹನಿಟ್ರ್ಯಾಪ್ ಬಗ್ಗೆ ಸುದೀರ್ಘವಾಗಿ 45 ನಿಮಿಷಗಳ ಮಹತ್ವದ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.
ದೇಶಾದ್ಯಂತ ಸದ್ದು ಮಾಡಿರುವ ಹನಿಟ್ರ್ಯಾಪ್ ವಿಚಾರದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಂದ ದೂರವಾಣಿ ಮೂಲಕ ಮಾಹಿತಿ ಪಡೆದಿದೆ. ಆದರೂ ಸಹ ಎಐಸಿಸಿ ಅಧ್ಯಕ್ಷರು ಸಿಎಂ ಅವರ ಆರೋಗ್ಯ ವಿಚಾರಿಸುವ ನೆಪದಲ್ಲಿ ಬಂದು ಹನಿಟ್ರ್ಯಾಪ್ ಬಗ್ಗೆ ಸುದೀರ್ಘವಾಗಿ 45 ನಿಮಿಷಗಳ ಮಹತ್ವದ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.
ಇನ್ನು ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯನವರ ಚರ್ಚೆ ವೇಳೆ ಸಚಿವರಾದ ಪ್ರಿಯಾಂಕಾ ಖರ್ಗೆ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಜರಿದ್ದು, ಉಭಯ ನಾಯಕರು ಬರೋಬ್ಬರಿ 45 ನಿಮಿಷಗಳ ಕಾಲ ಮಹತ್ವದ ಮಾತುಕತೆ ಮಾಡಿದ್ದಾರೆ.
ಸಾಮಾನ್ಯ. ಹಲವು ರಾಜಕೀಯ ವಿಚಾರಗಳು ಚರ್ಚೆ ಆಗಿರುತ್ತೆ ಎಂದು ಸಚಿವ ಪ್ರಿಯಾಂಕಾ ಖರ್ಗೆ ಸ್ಪಷ್ಟಪಡಿಸಿದರು. ಈ ಮೂಲಕ ಹನಿಟ್ರ್ಯಾಪ್ ಬಗ್ಗೆಯೂ ಸಹ ಚರ್ಚೆ ನಡೆದಿದೆ ಎನ್ನುವುದನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರು ಪರೋಕ್ಷವಾಗಿ ಖಚಿತಪಡಿಸಿದಂತಾಗಿದೆ.
ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂದು ಸಚಿವ ಕೆ.ಎನ್ ರಾಜಣ್ಣ ಸದನದಲ್ಲಿ ಹೇಳಿಕೆ ನೀಡಿ ಸಂಚಲನ ಸೃಷ್ಟಿಸಿದ್ದರು. ಈ ವಿಚಾರವನ್ನೇ ಮುಂದಿಟ್ಟುಕೊಂಡು ಬಿಜೆಪಿ ಶಾಸಕರು ಶುಕ್ರವಾರ ಸದನದಲ್ಲಿ ಕೈ ಸರ್ಕಾರದ ವಿರುದ್ಧ ಪ್ರತಿಭಟಿಸಿದ್ದಲ್ಲದೆ, ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆಗೆ ವಹಿಸುವಂತೆ ಬಿಗಿ ಪಟ್ಟು ಹಿಡಿದಿದ್ದರು. ಈ ವಿಚಾರವನ್ನು ಕಾಂಗ್ರೆಸ್ ಹೈಕಮಾಂಡ್ ನಾಯಕರು ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತಂತೆ ಶುಕ್ರವಾರ ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕರೆ ಮಾಡಿ ಸಂಪೂರ್ಣ ಮಾಹಿತಿ ಪಡೆದಿದ್ದಾರೆ.
ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂದು ಸಚಿವ ಕೆ.ಎನ್ ರಾಜಣ್ಣ ಸದನದಲ್ಲಿ ಹೇಳಿಕೆ ನೀಡಿ ಸಂಚಲನ ಸೃಷ್ಟಿಸಿದ್ದರು. ಈ ವಿಚಾರವನ್ನೇ ಮುಂದಿಟ್ಟುಕೊಂಡು ಬಿಜೆಪಿ ಶಾಸಕರು ಶುಕ್ರವಾರ ಸದನದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟಿಸಿದ್ದಲ್ಲದೆ, ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆಗೆ ವಹಿಸುವಂತೆ ಹೈಡ್ರಾಮಾ ಸೃಷ್ಟಿಸಿದ್ದರು. ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಖುದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ-ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಫೋನ್ ಮಾಡಿ ಎಲ್ಲಾ ಮಾಹಿತಿ ಪಡೆದಿದ್ದಾರೆ.