ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ: ಲಾರಿ ಚಾಲಕನನ್ನು ಬಂಧಿಸಿದ ಪೊಲೀಸರು

Share It

ಬೆಳಗಾವಿ: ಕಿತ್ತೂರು ‌ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಲಾರಿ ಚಾಲಕನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರ ದ ಪುಣೆ ಜಿಲ್ಲೆಯ ಇಂದಾಪುರ ತಾಲೂಕಿನ ತಕ್ರಾರವಾಡಿ ಗ್ರಾಮದ ಮಧುಕರ ಕೊಂಡಿರಾಮ ಸೋಮವಂಶ(65) ಬಂಧಿತ.
ಜನವರಿ 14 ರಂದು ಅಂಬಡಗಟ್ಟಿ ಗ್ರಾಮದ ಬಳಿ ಅಪಘಾತವಾಗಿತ್ತು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರಿಗೆ ಅಪಘಾತ ಮಾಡಿ ಪರಾರಿಯಾಗಿದ್ದ ಲಾರಿ ಚಾಲಕನ ವಿರುದ್ಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಹೆಬ್ಬಾಳ್ಕರ್ ಕಾರು ಚಾಲಕ ಹಿಟ್ ಆ್ಯಂಡ್ ರನ್ ಪ್ರಕರಣ ದಾಖಲಾಗಿತ್ತು.

ಕಾರಿಗೆ ತಾಗಿದ್ದ ಲಾರಿಯ ಬಣ್ಣ ಸೇರಿ ಸ್ಥಳದಲ್ಲಿ ಸಿಕ್ಕ ಸಾಕ್ಷಿಗಳನ್ನು ಪೊಲೀಸರು ಎಫ್‌ಎಸ್‌ಎಲ್ ಗೆ ರವಾನಿಸಿದ್ದರು. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಲಾರಿ ಪತ್ತೆ ಹಚ್ಚಿ ಚಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್‌ಪಿ ಭೀಮಾಶಂಕರ ಗುಳೇದ ತಿಳಿಸಿದ್ದಾರೆ.


Share It

You May Have Missed

You cannot copy content of this page