ಆರೋಗ್ಯ ಉಪಯುಕ್ತ ಸುದ್ದಿ

ಚಿಕ್ಕಬಳ್ಳಾಪುರದಲ್ಲಿ ಮೆಂಟಲ್ ಹೆಲ್ತ್ ಲೈಬ್ರರಿ : ಡೆನ್ಮಾರ್ಕ್ ಮಾದರಿ ಪ್ರಯೋಗ 3 ಜಿಲ್ಲೆಯಲ್ಲಿ ಜಾರಿ

Share It

ಬೆಂಗಳೂರು: ಇತ್ತೀಚೆಗೆ ಹೆಚ್ಚುತ್ತಿರುವ ಮಾನಸಿಕ ಒತ್ತಡಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪುಸ್ತಕಗಳ ಪಾತ್ರ ಬಹಳ ಮುಖ್ಯವಾದುದು. ಅದಕ್ಕಾಗಿ, ಮಾನವ ಗ್ರಂಥಾಲಯ ದಂತಹ ಹೊಸ ಪ್ರಯೋಗವನ್ನು ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಆರಂಭಿಸಲಾಗುತ್ತಿದೆ.

ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಳ್ಳುವ ಹಾಗೂ ಒತ್ತಡದಿಂದ ಸಾವಿಗೀಡಾಗುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂತಹದ್ದೊಂದು ಮಹತ್ವದ ಯೋಜನೆಯನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಾರಿಗೊಳಿಸಲಾಗಿದೆ. ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಈ ಯೋಜನೆ ಪ್ರಾಯೋಗಿಕವಾಗಿ ಜಾರಿಯಾಗುತ್ತಿದೆ.

ಮಾನಸಿಕ ಆರೋಗ್ಯದ ರ್ಯಾಂಕಿಂಗ್ ನಲ್ಲಿ ಉತ್ತಮ ಸ್ಥಾನದಲ್ಲಿರುವ ಡೆನ್ಮಾರ್ಕ್ ದೇಶದಲ್ಲಿ ಜಾರಿಯಲ್ಲಿರುವ ಇಂತಹದ್ದೊಂದು ಯೋಜನೆಯನ್ನು ಕರ್ನಾಟಕದಲ್ಲಿ ಜಾರಿಗೊಳಿಸಲಾಗಿತ್ತಿದೆ. ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯೋಜನೆ ಮೊದಲ ಹಂತದಲ್ಲಿ ಜಾರಿಗೆ ಬರಲಿದೆ.

ಮಾನಸ ಸಂವಾದ:ಮಾನವ ಗ್ರಂಥಾಲಯ ಹೆಸರಿನಲ್ಲಿ ಯೋಜನೆ ಜಾರಿಗೆ ಬರುತ್ತಿದ್ದು, ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ 30 ಪುಸ್ತಕಗಳನ್ನು ಗುರುತಿಸಲಾಗಿದೆ. 15 ಗ್ರಂಥಾಲಯಗಳು ಮಾನವ ಗ್ರಂಥಾಲಯಗಳಾಗಿ ಕಾರ್ಯನಿರ್ವಹಿಸಲಿವೆ. ಈಗಾಗಲೇ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಈ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಐಟಿಐ ವಿದ್ಯಾರ್ಥಿಗಳಿಂದ ಬೀದಿನಾಟಕಗಳ ಪ್ರದರ್ಶನ ನಡೆಸಲಾಗಿದೆ.

ಪ್ರಸ್ತುತ ಪ್ರಯೋಗಿಕವಾಗಿ ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆರಂಭವಾಗಿರುವ ಈ ಗ್ರಂಥಾಲಯ, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ವಿಸ್ತರಣೆಯಾಗಲಿದೆ. ಯೂರೂಪ್ ದೇಶಗಳಲ್ಲಿ ಜನಪ್ರಿಯತೆ ಪಡೆದಿರುವ ಈ ಯೋಜನೆ ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿಗೆ ಬರುತ್ತಿದೆ. ಆ ಮೂಲಕ ಮಾನಸಿಕ ಒತ್ತಡದಿಂದ ಆಗುವ ತೊಂದರೆಗಳನ್ನು ತಡೆಯುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಲಿದೆ.


Share It

You cannot copy content of this page