ಹುಣಸಗಿ : ತಾಲೂಕಿನ ಕೊಡೇಕಲ್ ಗ್ರಾಮದ ಇಸ್ಪೀಟ್ ಅಡ್ಡೆಯ ಮೇಲೆ ಮಾಹಿತಿ ಪಡೆದು PSI ಅಯ್ಯಪ್ಪ ನೇತ್ರತ್ವದಲ್ಲಿ ದಾಳಿ ನಡೆಸಿ, 22 ಮಂದಿಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಈ ಸಂಬಂಧ ಸ್ಥಳದಲ್ಲಿದ್ದ 86,960 ರು ನಗದು ವಶಕ್ಕೆ ಪಡೆಯಲಾಗಿದೆ.
ಯಾದಗಿರಿ ಜಿಲ್ಲೆ ಎಸ್.ಪಿ. ಪೃಥ್ವಿಕ್ ಶಂಕರ್ ಹಾಗೂ ಡಿವೈಎಸ್ಪಿ ಜಾವೀದ್ ಇನಾಮ್ದಾರ್ ಮತ್ತು CPI ರವಿಕುಮಾರ ಎಸ್.ಎನ್ ಮಾರ್ಗದರ್ಶನದಲ್ಲಿ ದಾಳಿ ನಡೆದಿದ್ದು, PSI ಅಯ್ಯಪ್ಪ ನೇತ್ರತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು.
ಕೊಡೇಕಲ್ ಗ್ರಾಮದ ನಿಜಲಿಂಗಪ್ಪ ಗುಡಿ ಹತ್ತಿರ ಇಸ್ಪೀಟ್ ಆಡುತ್ತಿದ್ದ 13 ಜನ ಹಾಗೂ ಸ್ಥಳದಿಂದ ಒಟ್ಟು ನಗದು ಹಣ 58800/- ರೂ. ನಗದು ವಶಕ್ಕೆ ಪಡೆದಿದ್ದರೆ, ಮತ್ತು ಕೊಡೇಕಲ್ ಗ್ರಾಮದ ಬಸ್ ನಿಲ್ದಾಣದ ಹತ್ತಿರ 9 ಜನ ಹಾಗೂ ಸ್ಥಳದಿಂದ ಒಟ್ಟು ನಗದು ಹಣ 28,160/-ರೂ, ನಗದು ಜಪ್ತಿ ಮಾಡಿಕೊಳ್ಳಲಾಗಿದೆ. ಒಟ್ಟಾರೆ 86,960 ಹಣ ಮತ್ತು 22ಜನ ಇಸ್ಪೇಟ್ ಆಡುತ್ತಿರುವರನ್ನು ಬಂಧಿಸಲಾಗಿದೆ.
ಈ ಬಗ್ಗೆ ಕೊಡೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಮುಂದೆ ಇಂತಹ ಅಡ್ಡೆಗಳ ಮೇಲೆ ನಿರಂತರ ದಾಳಿ ನಡೆಸಿ, ಇಂತಹ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಪೊಲೀಸ್ ವರಿಷ್ಠಾಧಿಕಾರಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.