ಬೆಂಗಳೂರು: ಇದೇ ಶನಿವಾರ ನಡೆಯಲಿರುವ ಮಹತ್ವದ ಐಪಿಎಲ್ ಲೀಗ್ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರಿಸಲಿದೆ.
ಆದರೆ ಈ ಮಹತ್ವದ ಪಂದ್ಯದಲ್ಲಿ ಆರ್.ಸಿ.ಬಿ ತಂಡದ ಪ್ರಮುಖ 5 ಆಟಗಾರರು ಗೈರು ಹಾಜರಾಗಲಿದ್ದಾರೆ ಎಂಬ ಶಾಕಿಂಗ್ ನ್ಯೂಸ್ ಸಿಕ್ಕಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎಡಗೈ ಬ್ಯಾಟ್ಸ್ ಮನ್ ದೇವದತ್ ಪಡಿಕ್ಕಲ್ ಗಾಯಗೊಂಡಿದ್ದು, ಹೀಗಾಗಿ ಮುಂದಿನ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಅಲ್ಲದೆ ಅವರ ಬದಲಿಗೆ ಇದೀಗ ತಂಡಕ್ಕೆ ಕರ್ನಾಟಕದ ಬಲಗೈ ಬ್ಯಾಟ್ಸ್ಮನ್ ಮಯಾಂಕ್ ಅಗರ್ವಾಲ್ ಆಯ್ಕೆಯಾಗಿದ್ದಾರೆ.
ಇನ್ನು ಭುಜದ ನೋವಿನಿಂದ ಬಳಲುತ್ತಿರುವ ಜೋಶ್ ಹೇಝಲ್ವುಡ್ ಕೂಡ ಆರ್ಸಿಬಿ ತಂಡದ ಉಳಿದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಹೀಗಾಗಿ ಆಸ್ಟ್ರೇಲಿಯಾದ ಈ ವೇಗಿ ಕೂಡ ಪ್ಲೇಆಫ್ ಸುತ್ತಿನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ.
ಇನ್ನು ಭುಜದ ನೋವಿನಿಂದ ಬಳಲುತ್ತಿರುವ ಜೋಶ್ ಹೇಝಲ್ವುಡ್ ಕೂಡ ಆರ್ಸಿಬಿ ತಂಡದ ಉಳಿದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಹಾಗೆಯೇ ಆರ್ಸಿಬಿ ತಂಡದ ಆರಂಭಿಕ ಬ್ಯಾಟ್ಸ್ಮನ್ ಜೇಕಬ್ ಬೆಥೆಲ್ ಕೂಡ ಪ್ಲೇಆಫ್ ಪಂದ್ಯದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಇಂಗ್ಲೆಂಡ್ ತಂಡದಲ್ಲಿ ಬೆಥೆಲ್ ಸ್ಥಾನ ಪಡೆದಿದ್ದಾರೆ. ಹೀಗಾಗಿ ಅವರು ಕೂಡ ಕೆಕೆಆರ್ ಹಾಗೂ ಎಸ್ಆರ್ಹೆಚ್ ವಿರುದ್ಧದ ಪಂದ್ಯಗಳ ಬಳಿಕ ತವರಿಗೆ ಹಿಂತಿರುಗಲಿದ್ದಾರೆ.
ಹಾಗೆಯೇ ಆರ್ಸಿಬಿ ತಂಡದ ಆರಂಭಿಕ ದಾಂಡಿಗ ಜೇಕಬ್ ಬೆಥೆಲ್ ಕೂಡ ಪ್ಲೇಆಫ್ ಪಂದ್ಯದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಇಂಗ್ಲೆಂಡ್ ತಂಡದಲ್ಲಿ ಬೆಥೆಲ್ ಸ್ಥಾನ ಪಡೆದಿದ್ದಾರೆ. ಹೀಗಾಗಿ ಅವರು ಕೂಡ ಕೆಕೆಆರ್ ಹಾಗೂ ಎಸ್ಆರ್ಹೆಚ್ ವಿರುದ್ಧದ ಪಂದ್ಯಗಳ ಬಳಿಕ ತವರಿಗೆ ಹಿಂತಿರುಗಲಿದ್ದಾರೆ.
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ತಂಡದ ಭಾಗವಾಗಿರುವ ದಕ್ಷಿಣ ಆಫ್ರಿಕಾ ವೇಗಿ ಲುಂಗಿ ಎನ್ಗಿಡಿ ಕೂಡ ಮೇ 25 ರಂದು ತವರಿಗೆ ಮರಳಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಆರ್ಸಿಬಿ ತಂಡವು ಪ್ಲೇಆಫ್ ಪ್ರವೇಶಿಸಿದರೆ ಲುಂಗಿ ಎನ್ಗಿಡಿ ಕೂಡ ಕಾಣಿಸಿಕೊಳ್ಳುವುದಿಲ್ಲ.
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ತಂಡದ ಭಾಗವಾಗಿರುವ ದಕ್ಷಿಣ ಆಫ್ರಿಕಾ ವೇಗಿ ಲುಂಗಿ ಎನ್ಗಿಡಿ ಕೂಡ ಮೇ 25 ರಂದು ತವರಿಗೆ ಮರಳಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಆರ್ಸಿಬಿ ತಂಡವು ಪ್ಲೇಆಫ್ ಪ್ರವೇಶಿಸಿದರೆ ಲುಂಗಿ ಎನ್ಗಿಡಿ ಕೂಡ ಕಾಣಿಸಿಕೊಳ್ಳುವುದಿಲ್ಲ.
ಮತ್ತೊಂದೆಡೆ ರೊಮಾರಿಯೊ ಶೆಫರ್ಡ್ ವೆಸ್ಟ್ ಇಂಡೀಸ್ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ನಡುವಣ ಏಕದಿನ ಸರಣಿ ಮೇ 29 ರಿಂದ ಶುರುವಾಗಲಿದೆ. ಹೀಗಾಗಿ ರೊಮಾರಿಯೊ ಶೆಫರ್ಡ್ ಕೂಡ ಪ್ಲೇಅಫ್ ಪಂದ್ಯಕ್ಕೂ ಮುನ್ನವೇ ಆರ್ಸಿಬಿ ತಂಡವನ್ನು ತೊರೆಯಲಿದ್ದಾರೆ ಎಂದು ವರದಿಯಾಗಿದೆ.
ಮತ್ತೊಂದೆಡೆ ರೊಮಾರಿಯೊ ಶೆಫರ್ಡ್ ವೆಸ್ಟ್ ಇಂಡೀಸ್ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ನಡುವಣ ಏಕದಿನ ಸರಣಿ ಮೇ 29 ರಿಂದ ಶುರುವಾಗಲಿದೆ. ಹೀಗಾಗಿ ರೊಮಾರಿಯೊ ಶೆಫರ್ಡ್ ಕೂಡ ಪ್ಲೇಅಫ್ ಪಂದ್ಯಕ್ಕೂ ಮುನ್ನವೇ ಆರ್ಸಿಬಿ ತಂಡವನ್ನು ತೊರೆಯಲಿದ್ದಾರೆ ಎಂದು ವರದಿಯಾಗಿದೆ.
ಒಟ್ಟಿನಲ್ಲಿ ಪ್ಲೇಆಫ್ ಸುತ್ತಿಗೆ ಪ್ರವೇಶಿಸುವ ಹಂತದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇದೀಗ ಪ್ರಮುಖ ಆಟಗಾರರ ಅಲಭ್ಯತೆಯೇ ದೊಡ್ಡ ಚಿಂತೆ. ಏಕೆಂದರೆ ಪ್ಲೇಆಫ್ ಪಂದ್ಯಗಳು ಮೇ 29 ರಿಂದ ಶುರುವಾಗಲಿದ್ದು, ಈ ಪಂದ್ಯಗಳಿಗೆ ಆರ್ಸಿಬಿ ತಂಡದ ಐವರು ಆಟಗಾರರು ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ. ಈ ಐವರ ಅನುಪಸ್ಥಿತಿ ನಡುವೆಯೂ ಭರ್ಜರಿ ಪ್ರದರ್ಶನ ನೀಡಿ ಈ ಬಾರಿ ಆರ್ಸಿಬಿ ಕಪ್ ಗೆಲ್ಲಲಿದೆಯಾ? ಎಂದು ಕಾದು ನೋಡಬೇಕಿದೆ.
ಒಟ್ಟಿನಲ್ಲಿ ಪ್ಲೇಆಫ್ ಸುತ್ತಿಗೆ ಪ್ರವೇಶಿಸುವ ಹಂತದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇದೀಗ ಪ್ರಮುಖ ಆಟಗಾರರ ಅಲಭ್ಯತೆಯೇ ದೊಡ್ಡ ಚಿಂತೆ. ಏಕೆಂದರೆ ಪ್ಲೇಆಫ್ ಪಂದ್ಯಗಳು ಮೇ 29 ರಿಂದ ಶುರುವಾಗಲಿದ್ದು, ಈ ಪಂದ್ಯಗಳಿಗೆ ಆರ್ಸಿಬಿ ತಂಡದ ಐವರು ಆಟಗಾರರು ಅಲಭ್ಯರಾಗುವುದು ಬಹುತೇಕ ಖಚಿತವಾಗಿದೆ. ಈ ಐವರ ಅನುಪಸ್ಥಿತಿಯಲ್ಲಿ ಬೆಂಗಳೂರು ಪ್ಲೇ-ಆಫ್ ಪ್ರವೇಶ ಪಡೆಯಲು ಸಾಧ್ಯವಿದೆಯೋ? ಎಂಬ ಪ್ರಶ್ನೆಗೆ ಕೆಲವೇ ದಿನಗಳ ನಂತರ ಖಚಿತವಾದ ಉತ್ತರ ಸಿಗಲಿದೆ.