ಅಪರಾಧ ಸುದ್ದಿ

ಏರ್ ಪೋರ್ಟ್ ರಸ್ತೆಯಲ್ಲಿ ಖಾಸಗಿ ಕಂಪನಿ ಸಿಬ್ಬಂದಿಯ ಬಸ್ ಅಪಘಾತ: ಓರ್ವ ಸಾವು, 35ಕ್ಕೂ ಹೆಚ್ಚು ಜನರಿಗೆ ಗಾಯ

Share It

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಬೇಗೂರು ಬಳಿ ಖಾಸಗಿ ಕಂಪನಿ ಸಿಬ್ಬಂದಿ ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ ಓರ್ವ ಮೃತಪಟ್ಟು, 35 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶದ ರಾಮ್ ಪುರ್‌ಮೂಲದ ಸಂತೋಷ್ ಯಾದವ್ (35) ಎಂದು ಗುರುತಿಸಲಾಗಿದೆ. ಈತ ಅಶೋಕಾ ಬ್ಯುಲ್ಡ್ ಕಾನ್ ಕಂಪನಿಯ ರೋಲಾರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಎನ್ನಲಾಗಿದೆ.

ಬಸ್ ನಲ್ಲಿ ಸುಮಾರು 40 ಜನ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ. 34 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಓರ್ವ ಸ್ಥಳದಲ್ಲಿಯೇ ಮೃತೊಟ್ಟಿರುವ ಕುರಿತು ವರದಿಯಾಗಿದೆ.


Share It

You cannot copy content of this page