ಹುಬ್ಬಳ್ಳಿ:- ಕರ್ನಾಟಕ ರಾಜ್ಯ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು ಆಯೋಜಿಸಿದ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣನವರ ಹಾಗೂ ಭಾರತರತ್ನ ಡಾ ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನಾಚರಣೆಯ ಅಂಗವಾಗಿ ಆಲೂರು ವೆಂಕಟರಾಯರ ಸಭಾಭವನ ಧಾರವಾಡ ರಾಜ್ಯ ಮಟ್ಟದ ಬಸವ ಹಾಗೂ ಅಂಬೇಡ್ಕರ್ ಜಯಂತಿಯ ನೆನಪಿನಾರ್ಥವಾಗಿ ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಸವ ಕಾಯಕ ಶ್ರೀ ರಾಷ್ಟ್ರ ಪ್ರಶಸ್ತಿ 2025 ನೇ ಸಾಲಿನ ಪ್ರಶಸ್ತಿಯನ್ನು ಕೆಂಪಣ್ಣ ಪಾಂಡಪ್ಪ ಕಡಕಬಾವಿ ಅವರಿಗೆ ನೀಡಿ ಗೌರವಿಸಲಾಯಿತು.
ಇವರು ಪ್ರಥಮ ದರ್ಜೆ ಸಹಾಯಕ ಉಪ ಖಜಾನೆ ಗೋಕಾಕ್ ಆಡಳಿತ ಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಕನ್ನಡ ನಾಡು ನುಡಿ ಹಾಗೂ ಸಾರ್ವಜನಿಕರ ಉತ್ತಮ ಭವಿಷ್ಯ ನಿರ್ಮಾಣ ಮಾಡುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಅತ್ಯುತ್ತಮ ಸೇವೆ ಸಲ್ಲಿಸುತ್ತಾ ಬರುತ್ತಿದ್ದಿದ್ದನ್ನು ಗುರುತಿಸಿ ರಾಷ್ಟ್ರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು