ಆರೋಗ್ಯ ಸುದ್ದಿ

ರಾಜ್ಯದಲ್ಲಿ ಮತ್ತೇ ಆರಂಭವಾಯ್ತು ಕರೋನಾ ಭೀತಿ: ಕಟ್ಟೆಚ್ಚರಕ್ಕೆ ಮುಂದಾದ ಸರಕಾರ

Share It

ಬೆಂಗಳೂರು: ರಾಜ್ಯದಲ್ಲಿ ಮತ್ತೇ ಕರೋನಾ ಭೀತಿ ಹೆಚ್ಚಾಗಿದ್ದು, ಒಟ್ಟಾರೆ 35 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿದ್ದು, ಶುಕ್ರವಾರ ಒಂದೇ ದಿನ ೧೯ ಪ್ರಕರಣಗಳು ವರದಿಯಾಗಿವೆ.

ನೆರೆಯ ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶ ಹಾಗೂ ಮಹಾರಾಷ್ಟçದಲ್ಲಿ ಹೆಚ್ಚಿನ ಸಂಖ್ಯೆಯ ಕೋವಿಡ್ ಪಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಆತಂಕ ಶುರುವಾಗಿದೆ. ಹೀಗಾಗಿ, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ.

ಸ್ವತಃ ಸಿಎಂ ಸಿದ್ದರಾಮಯ್ಯ ಮಾಸ್ಕ್ ಧರಿಸಿ ಜನತಾ ದರ್ಶನದಲ್ಲಿ ಜನರ ಅಹವಾಲು ಸ್ವೀಕಾರ ಮಾಡಿದ್ದಾರೆ. ದಿನೇಶ್ ಗುಂಡೂರಾವ್ ಮಾತನಾಡಿ, ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದು ಸಹಜ. ಹಾಗಂತ ಜನ ಆತಂಕಕ್ಕೆ ಒಳಗಾಗುವುದು ಬೇಡ, ಸರಕಾರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ.


Share It

You cannot copy content of this page