ಬೆಳಗಾವಿ : ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಕೊಚ್ಚಿ ಹತ್ಯೆ ಮಾಡಿರುವ ಘಟನೆ ಹುಕ್ಕೇರಿ ತಾಲೂಕಿನ ಮದಮಕ್ಕನಾಳ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಮದಮಕ್ಕನಾಳ ಗ್ರಾಮದ ಸಚಿನ್ ಕಾಂಬಳೆ (26) ಹತ್ಯೆ ಯಾದ ಯುವಕ. ಯುವಕನನ್ನು ಮನಬಂದಂತೆ ಕೊಚ್ಚಿ ಹತ್ಯೆ ಮಾಡಲಾಗಿದೆ.
ಮದಮಕ್ಕನಾಳ ಗ್ರಾಮದ ಬಳಿಯಲ್ಲಿ ಇರುವ ಜಮೀನಿನಲ್ಲಿ ಯುವಕ ಸಚಿನ್ ದನಗಳಿಗೆ ಮೇವು ತರಲು ಹೋದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆ ಹುಕ್ಕೇರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ತನಿಖೆ ನಡೆಸುತ್ತಿದ್ದಾರೆ.