ಉಪಯುಕ್ತ ಸುದ್ದಿ

ರಾಜ್ಯದ ದೇವಸ್ಥಾನಗಳು ಇನ್ಮುಂದೆ ಪ್ಲಾಸ್ಟಿಕ್ ಮುಕ್ತ: ಮುಜರಾಯಿ ಇಲಾಖೆಯ ಮಹತ್ವದ ತೀರ್ಮಾನ

Share It

ಬೆಂಗಳೂರು: ರಾಜ್ಯದ ದೇವಸ್ಥಾನಗಳಲ್ಲಿ ಇನ್ಮುಂದೆ ಸಂಪೂರ್ಣವಾಗಿ ಪ್ಲಾಸ್ಟಿಕ್ ಮುಕ್ತಗೊಳಿಸುವ ಮಹತ್ವದ ತೀರ್ಮಾನವನ್ನು ಮುಜರಾಯಿ ಇಲಾಖೆ ತೆಗೆದುಕೊಂಡಿದೆ.

ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಆಗಸ್ಟ್ 15 ರ ನಂತರ ಪ್ಲಾಸ್ಟಿಕ್ ಮುಕ್ತ ದೇವಸ್ಥಾನ ಜಾರಿಯಾಗಲಿದೆ. ಪ್ಲಾಸ್ಟಿಕ್ ಬಳಕೆಯ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಇಲಾಖೆ ತೀರ್ಮಾನಿಸಿದೆ.

ಪ್ಲಾಸ್ಟಿಕ್ ಗೆ ಪರ್ಯಾಯ ವಸ್ತುಗಳನ್ನು ಬಳಕೆ ಮಾಡಲು ಉತ್ತೇಜಿಸಲಾಗುತ್ತದೆ. ಈ ಬಗ್ಗೆ ಭಕ್ತರಲ್ಲಿ ಜಾಗೃತಿಯನ್ನು ಮೂಡಿಸಲಾಗುತ್ತದೆ. ಒಟ್ಟಾರೆ, ದೇವಸ್ಥಾನದ ಪಾವಿತ್ರ್ಯತೆ ಜತೆಗೆ, ಅಲ್ಲಿನ ಸ್ವಚ್ಚತೆ ಮತ್ತು ಪರಿಸರ ಸಂರಕ್ಷಣೆಯೂ ನಮ್ಮ ಜವಾಬ್ದಾರಿ ಆಗಿದ್ದು, ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.


Share It

You cannot copy content of this page