ಬೆಂಗಳೂರು: ಮದ್ಯ ಸೇವನೆ ಮಾಡಿ ಚಾಲಕರು ಶಾಲಾ ಬಸ್ಗಳನ್ನು ಚಲಾಯಿಸುವುದು ಪತ್ತೆಯಾದರೆ ಆಡಳಿತ ಮಂಡಳಿಗಳನ್ನೂ ಹೊಣೆಯಾಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ’ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ ನೀಡಿದರು.
ಸಂಚಾರ ಪೊಲೀಸರು ಸೋಮವಾರ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 58 ಶಾಲಾ ಬಸ್ ಚಾಲಕರು ಮದ್ಯ ಸೇವಿಸಿ ವಾಹನ ಚಾಲನೆ ಮಾಡಿರುವುದು ದೃಢಪಟ್ಟಿತ್ತು.
ಈ ಸಂಬಂಧ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ”ಶಾಲೆಗಳ ಬಸ್ ಚಾಲಕರು ಮದ್ಯ ಸೇವಿಸಿ ಚಾಲನೆ ಮಾಡುತ್ತಿರುವುದು ಆತಂಕಕಾರಿ ಸಂಗತಿ. ಅಂತಹ ಚಾಲಕರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು.
ಚಾಲಕರು ಎಸಗುವ ಈ ಲೋಪಕ್ಕೆ ಶಾಲಾ ಆಡಳಿತ ಮಂಡಳಿಗಳು ಜವಾಬ್ದಾರಿಯಾಗಬೇಕು. ಹೀಗಾಗಿ, ಅಗತ್ಯ ಬಿದ್ದರೆ ಅವರಿಗೂ ನೋಟಿಸ್ ಜಾರಿಗೊಳಿಸಿ. ಶಾಲಾ ಮಕ್ಕಳ ಸುರಕ್ಷತೆ ಸಂಬಂಧ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗುವುದು,” ಎಂದು ತಿಳಿಸಿದರು.