ಅಪರಾಧ ಸುದ್ದಿ

ರಾಜ್ಯದೆಲ್ಲೆಡೆ ಲೋಕಾಯುಕ್ತ ದಾಳಿ: ಎಂಟು ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಚಳಿ ಬಿಡಿಸಿದ ಲೋಕಾಯುಕ್ತ

Share It

ಬೆಂಗಳೂರು : ರಾಜ್ಯದ ವಿವಿಧೆಡೆ ೮ ಜನ ಸರ್ಕಾರಿ ಅಧಿಕಾರಿಗಳಿಗೆ ಸಂಬAಧಿಸಿದ ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಆದಾಯಕ್ಕಿಂತಲೂ ಅಧಿಕ ಗಳಿಕೆ, ಭ್ರಷ್ಟಾಚಾರ ಸೇರಿ ವಿವಿಧ ಆರೋಪಗಳ ಹಿನ್ನೆಲೆಯಲ್ಲಿ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಆನೇಕಲ್, ಗದಗ, ಧಾರವಾಡ, ಕಲಬುರಗಿ ಹಾಗೂ ಬೆಳಗಾವಿಯ ವಿವಿಧೆಡೆ ದಾಳಿ ನಡೆದಿದ್ದು, ಇನ್ನೂ ಶೋಧ ಕಾರ್ಯ ಮುಂದುವರೆದಿದೆ ಎಂದು ಲೋಕಾಯುಕ್ತ ಮೂಲಗಳು ಮಾಹಿತಿ ನೀಡಿವೆ.

ದಾಳಿಗೊಳಗಾದ ಅಧಿಕಾರಿಗಳ ವಿವರ: ಬಿಬಿಎಂಪಿ ಕಾರ್ಯ ನಿರ್ವಾಹಕ ಇಂಜಿನಿಯರ್ ಪ್ರಕಾಶ್, ಶಿವಮೊಗ್ಗದ ಸಾವಯವ ಕೃಷಿ ವಿಭಾಗದ ಸಹ ಸಂಶೋಧನ ನಿರ್ದೇಶಕ ಡಾ.ಎಸ್.ಪ್ರದೀಪ್, ಚಿಕ್ಕಮಗಳೂರು ಪಟ್ಟಣ ಪುರಸಭೆ ಲೆಕ್ಕಾಧಿಕಾರಿ ಲತಾ ಮಣಿ, ಆನೇಕಲ್ ಪಟ್ಟಣ ಪುರಸಭೆಯ ಮುಖ್ಯಾಧಿಕಾರಿ ಕೆ.ಜಿ.ಅಮರನಾಥ್, ಗದಗ ಪಟ್ಟಣ ಪೊಲೀಸ್ ನಿರೀಕ್ಷಕರು ಧೃವರಾಜ್, ಧಾರವಾಡ ಮಲಪ್ರಭಾ ಪ್ರಾಜೆಕ್ಟ್ ಇಂಜಿನಿಯರ್ ಅಶೋಕ್ ವಲ್ಸಂದ್ ಮನೆಗಳ ಮೇಲೆ ದಾಳಿ ನಡೆದಿದೆ.

ಮುಂದುವರಿದು ಕಲ್ಬುರ್ಗಿಯ ಆರ್‌ಡಿಪಿಆರ್ ಮಾಜಿ ಎಂಜಿನಿಯರ್ ಮಲ್ಲಿಕಾರ್ಜುನ ಅಲಿಪುರ, ಕಲ್ಬುರ್ಗಿ ಪಿಡಿಒ ರಾಮಚಂದ್ರ, ಶಿವಮೊಗ್ಗ ವಿವಿ ಸಹ ಸಂಶೋಧನ ನಿರ್ದೇಶಕರ ಮನೆ ಮೇಲೆ ದಾಳಿ: ಸಾಗರ ತಾಲೂಕು ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಸಹ ಸಂಶೋಧನಾ ನಿರ್ದೇಶಕ ಡಾ.ಎಸ್.ಪ್ರದೀಪ್ ಎಂಬವರ ಮನೆ ಮೇಲೆ ಶಿವಮೊಗ್ಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಶಿವಮೊಗ್ಗ ನಗರದ ಪ್ರಿಯಾಂಕ ಲೇಔಟ್‌ನಲ್ಲಿನ ಅವರ ವಾಸದ ಮನೆ ಮೇಲೆ ಬೆಳಗ್ಗೆ ದಾಳಿ ನಡೆದಿದೆ. ಇದರ ಜೊತೆಗೆ ಇವರು ಆಸ್ತಿ ಹೊಂದಿರುವ ಶಿಕಾರಿಪುರ ತಾಲೂಕು ಭದ್ರಾಪುರ ಗ್ರಾಮದ ತೋಟದ ಮನೆ ಹಾಗೂ ಹೊಸನಗರ ತಾಲೂಕಿನ ತೋಟದ ಮನೆ ಮೇಲೂ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.


Share It

You cannot copy content of this page