ರಾಜಕೀಯ ಸುದ್ದಿ

ವೇದಿಕೆ ಮೇಲೆ ನಿಂದಿಸಿದ್ದ ಸಿಎಂ :ಸ್ವಯಂ ನಿವೃತ್ತಿಗೆ ಮುಂದಾದ ಎನ್.ವಿ.ಬರಮನಿ

Share It

ಬೆಳಗಾವಿ/ಧಾರವಾಡ: ಧಾರವಾಡ ಎಎಸ್‌ಪಿ ಎನ್.ವಿ. ಬರಮನಿ ಅವರು ಸ್ವಯಂ ನಿವೃತ್ತಿಗೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಬೆಳಗಾವಿಯಲ್ಲಿ ಕೆಲ ತಿಂಗಳ ಹಿಂದೆ ನಡೆದ ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ ಅವರಿಂದ ಬರಮನಿಯವರು ಅಪಮಾನಕ್ಕೆ ಒಳಗಾಗಿದ್ದರು. ಬೆಳಗಾವಿ ಸಮಾರಂಭದಲ್ಲಿ ಈ ಪೊಲೀಸ್ ಅಧಿಕಾರಿ ಮೇಲೆ ಸಿಎಂ ಕಪಾಳಮೋಕ್ಷಕ್ಕೆ ಮುಂದಾಗಿದ್ದರು. ಈ ಸನ್ನಿವೇಶದಿಂದ ಅಧಿಕಾರಿ ನೊಂದುಕೊಂಡಿದ್ದರು. ಅದೇ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.

ಸ್ವಯಂಪ್ರೇರಿತ ನಿವೃತ್ತಿಗೆ ಬರಮನಿ ಅವರು ಅರ್ಜಿ ಸಲ್ಲಿಸಿದ್ದಾರೆ. ಹಿರಿಯ ಅಧಿಕಾರಿಗಳು ಸಿಎಂ ಸಮ್ಮುಖದಲ್ಲಿ ಅಧಿಕಾರಿಯ ಮನವೊಲಿಸಲು ಪ್ರಯತ್ನಿಸಿದ್ದಾರೆ. ಮನವೊಲಿಕೆಯಿಂದ ಅಧಿಕಾರಿ ಬರಮನಿ ಅವರು ಸ್ವಲ್ಪಮಟ್ಟಿಗೆ ಶಾಂತವಾಗಿದ್ದಾರೆ. ತಮಗಾದ ಅವಮಾನಕ್ಕೆ ನೊಂದುಕೊಂಡಿದ್ದರು. ಹೀಗಾಗಿ, ಕೆಲಸದಿಂದಲೇ ಸ್ವಯಂ ನಿವೃತ್ತಿಗೆ ಮುಂದಾಗಿದ್ದರು ಎಂಬ ಮಾಹಿತಿ ದೊರೆತಿದೆ.


Share It

You cannot copy content of this page