ಬೆಂಗಳೂರು: ಶಕ್ತಿ ಯೋಜನೆಯು ಪ್ರತಿಷ್ಠಿತ ವಿಶ್ವ ದಾಖಲೆಗೆ Golden Book of World Records* ನಲ್ಲಿ ಸೇರ್ಪಡೆಯಾಗಿರುವುದನ್ನು ತಿಳಿಸಿ, ದಾಖಲೆಯ ಪ್ರಮಾಣ ಪತ್ರ ಮತ್ತು ಮೆಡಲ್ ಅನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ರಾಮಲಿಂಗಾ ರೆಡ್ಡಿ ತೋರಿಸಿದರು.
ಈ ದಾಖಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಳ ಸಂತೋಷ ವ್ಯಕ್ತಪಡಿಸಿ, ಸಾರಿಗೆ ಸಚಿವರು ಹಾಗೂ ಸಾರಿಗೆ ಸಂಸ್ಥೆಗಳ ಸಮಸ್ತ ಅಧಿಕಾರಿ/ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದರು. ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಈ ಸಂದರ್ಭದಲ್ಲಿ ಕೆ.ಜೆ.ಜಾರ್ಜ್, ಇಂಧನ ಸಚಿವರು, ಪಂಚ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಹೆಚ್.ಎಂ ರೇವಣ್ಣ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಉಪಾಧ್ಯಕ್ಷರು, ಗ್ಯಾರೆಂಟಿ ಯೋಜನೆ, ಅಕ್ರಂ ಪಾಷ, ವ್ಯವಸ್ಥಾಪಕ ನಿರ್ದೇಶಕರು,
ಕೆ ಎಸ್ ಆರ್ ಟಿ ಸಿ ಇವರು ಉಪಸ್ಥಿತರಿದ್ದರು.