ಅಪರಾಧ ಸುದ್ದಿ

hassan: ಭೀಕರ ಅಪಘಾತ: ಇಬ್ಬರು ಸಾವು

Share It

ಚನ್ನರಾಯಪಟ್ಟಣ: ಹಾಸನ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ.

ಚನ್ನರಾಯಪಟ್ಟಣ- ಹಾಸನ ನಡುವಿನ ಅಣ್ಣೇನಹಳ್ಳಿ ಗೇಟ್ ಬಳಿ ನಡೆದ ಅಪಘಾತದಲ್ಲಿ ಹಾಸನ ಕಡೆಯಿಂದ ಬರುತ್ತಿದ್ದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಣ್ಣೇನಹಳ್ಳಿ ಕಡೆಯಿಂದ ಬಂದ ಬೈಕ್ ಸವಾರರು ರಸ್ತೆಗೆ ನುಗ್ಗಿದ್ದಾರೆ ಎನ್ನಲಾಗಿದೆ.

ಈ ವೇಳೆ ನಿಯಂತ್ರಣ ಸಿಗದೆ ಕಾರು ಚಾಲಕ ಬೈಕ್ ಗೆ ಗುದ್ದಿದ್ದು, ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇಬ್ಬರು ಸುಮಾರು 50 ವರ್ಷ ವಯಸ್ಸಿನವರಾಗಿದ್ದು, ಗುರುತು ಸಿಕ್ಕಿಲ್ಲ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.


Share It

You cannot copy content of this page