ಹೊನ್ನಾವರ:ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ.ಎನ್.ಆರ್.ನಾಯಕ (90) ಹೊನ್ನಾವರ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ಸಂಜೆ 3.30ರ ಸುಮಾರು ನಿಧನರಾದರು.
ರಾಜ್ಯ ಸರಕಾರ 2003ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಮೂಲತಃ ಅಂಕೋಲಾ ತಾಲುಕಿನ ಭಾವಿಕೇರಿಯವರಾದ ಎನ್.ಆರ್.ನಾಯಕ, ಕಥೆ, ಸಂಶೋಧನಾ ಪ್ರಬಂಧ, ಜಾನಪದ ಸಂಪಾದನೆ ಹೀಗೆ ಸಾಹಿತ್ಯದ ವಿವಿಧ ಕ್ಷೇತ್ರಗಳಲ್ಲಿ ಅವರು ಕೆಲಸ ಮಾಡಿದ್ದರು.
ಇವರು ಕರ್ನಾಟಕ ರಾಜ್ಯೋತ್ಸವ, ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಅನೇಕ ಗಣ್ಯರು ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.