ಅಪರಾಧ ಸುದ್ದಿ

ವಾರಸುದಾರರಿಗೆ ಹಿಂದಿರುಗಿಸದ ಚಿನ್ನ: ಪೊಲೀಸ್ ಇನ್‌ಸ್ಪೆಕ್ಟರ್, ಸಿಬ್ಬಂದಿ ವಿರುದ್ಧ ದೂರು

Share It

ಬೆಂಗಳೂರು: ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳನ್ನ ಬಂಧಿಸಿ ಅವರಿಂದ ಚಿನ್ನ ರಿಕವರಿ ಮಾಡಿ ಅವನ್ನು ವಾರಸುದಾರರಿಗೆ ಹಿಂದಿರುಗಿಸದ ಹಿನ್ನೆಲೆ ಸೂರ್ಯನಗರ ಪೊಲೀಸ್ ಇನ್‌ಸ್ಪೆಕ್ಟರ್ ಮತ್ತು ಸಿಬ್ಬಂದಿ ಮೇಲೆ ದೂರು ದಾಖಲಾಗಿದೆ.
ಕೇಂದ್ರ ವಲಯ ಐಜಿ ಲಾಬೂರಾಮ್​ ಅವರಿಗೆ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ವೆಂಕಟಾಚಲಪತಿ ದೂರು ನೀಡಿದ್ದು, ದೂರು ಆಧರಿಸಿ ಇನ್‌ಸ್ಪೆಕ್ಟರ್​ ಸಂಜೀವ್ ಕುಮಾರ್ ಮಹಾಜನ್ ವಿರುದ್ಧ ಹೆಚ್ಚುವರಿ ಎಸ್ಪಿ ನೇತೃತ್ವದ ತನಿಖೆಗೆ ಸೂಚಿಸಲಾಗಿದೆ.
೧೦ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ ಮಾಡಿದ್ದ ತಮಿಳುನಾಡು ಮೂಲದ ಕುಖ್ಯಾತ ಸುಧಾಕರನ್ ಮತ್ತು ಗ್ಯಾಂಗ್​ನ ಸಂಜೀವ್ ಕುಮಾರ್ ಮಹಾಜನ್ ಬಂಧಿಸಿದ್ದರು. ಕಳ್ಳರ ಜೊತೆ ಚಿನ್ನ ಖರೀದಿಸಿದ್ದ ಆರೋಪಿಗಳೂ ಸಿಕ್ಕಿದ್ದರು. ಆದರೆ ಆರೋಪಿಗಳು ಕದ್ದಿದ್ದ ಸುಮಾರು ೨ ಕೆ.ಜಿ. ಚಿನ್ನದ ಪೈಕಿ ೨೦೦ ಗ್ರಾಂಗಳಷ್ಟನ್ನು ಮಾತ್ರ ಸರ್ಕಾರಕ್ಕೆ ಮತ್ತು ಚಿನ್ನ ಕಳೆದುಕೊಂಡವರಿಗೆ ತೋರಿಸಲಾಗಿದೆ. ಉಳಿದಿದ್ದನ್ನುಇನ್ಸ್​ಪೆಕ್ಟರ್​ ಮತ್ತು ಸಿಬ್ಬಂದಿಯೇ ಹಂಚಿಕೊAಡಿರೋದಾಗಿ ದೂರಲ್ಲಿ ಆರೋಪಿಸಲಾಗಿದೆ.


Share It

You cannot copy content of this page