ಭೀಕರ ಅಪಘಾತ : ರಾಜಧಾನಿ ಎಕ್ಸ್ಪ್ರೆಸ್ ಡಿಕ್ಕಿ ಹೊಡೆದು ಎಂಟು ಕಾಡಾನೆಗಳು ಸಾವು

Share It

ಗುವಾಹಟಿ (ಅಸ್ಸಾಂ): ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಕಾಡಾನೆಗಳು ಸಾವನ್ನಪ್ಪಿದ್ದು, ಒಂದು ಆನೆ ಗಾಯಗೊಂಡಿರುವ ಹೃದಯ ವಿದ್ರಾವಕ ಘಟನೆ ಹೋಜಾಯಿ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ.

ಆನೆಗಳ ಹಿಂಡು ರೈಲ್ವೆ ಹಳಿ ದಾಟುತ್ತಿದ್ದ ವೇಳೆ ಸಾಯಿರಂಗ್-ನವದೆಹಲಿ ನಡುವಿನ ರಾಜಧಾನಿ ಎಕ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ದುರಂತ ನಡೆದಿದೆ. ಡಿಕ್ಕಿ ರಭಸಕ್ಕೆ ರೈಲಿನ ಐದು ಬೋಗಿಗಳು ಹಳಿ ತಪ್ಪಿವೆ. ಆದರೆ, ರೈಲಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ರೀತಿಯ ಪ್ರಾಣಾಪಾಯ ಆಗಿಲ್ಲ.

ಶನಿವಾರ ನಸುಕಿನ ಜಾವ ೨:೧೭ಕ್ಕೆ ಹೋಜಾಯಿ ಜಿಲ್ಲೆಯ ಚಾಂಗ್‌ಜುರಾಯಿ ಬಳಿ ಅವಘಡ ನಡೆದಿದೆ ಎಂದು ನಾಗೌನ್ ವಲಯ ಅರಣ್ಯಾಧಿಕಾರಿ ಸುಹಾಸ್ ಕದಂ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕದಂ ಸೇರಿ ಇತರೆ ಅಧಿಕಾರಿಗಳು ದೌಡಾಯಿಸಿದ್ದಾರೆ.

ಅಪಘಾತದಿಂದಾಗಿ ಜಮುನಾಮುಖ್-ಕಂಪುರ ವಿಭಾಗದ ಮೂಲಕ ತೆರಳುವ ರೈಲುಗಳನ್ನು ಉತ್ತರ ಪ್ರದೇಶ ಮಾರ್ಗದ ಮೂಲಕ ಮಾರ್ಗ ಬದಲಾವಣೆ ಮಾಡಲಾಗಿದ್ದು, ರೈಲ್ವೆ ಹಳಿ ತಪ್ಪಿರುವ ಬೋಗಿಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ.


Share It

You May Have Missed

You cannot copy content of this page