ಉಪಯುಕ್ತ ಸುದ್ದಿ

ರಾಜ್ಯದಲ್ಲಿ ವಾಹನ್ -4 ಮೂಲಕ ಭಾರತ್ ಟ್ಯಾಕ್ಸಿ ಆರಂಭ:  ಕೆಂದ್ರಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಪತ್ರ

Share It

ಬೆಂಗಳೂರು: ರಾಜ್ಯದಲ್ಲಿ ವಾಹನ್ 4 ಮೂಲಕ ಭಾರತ್ ಟ್ಯಾಕ್ಸಿ ಆರಂಭಿಸುವ ಕುರಿತು ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಭಾರತ್ ಟ್ಯಾಕ್ಸಿ ಯೋಜನೆ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಟ್ಟಿರುವುದರಿಂದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಮತ್ತು ಸಹಕಾರ ಸಚಿವಾಲಯ, ಭಾರತ ಸರ್ಕಾರ ರವರಿಗೆ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಪ್ರಸ್ತಾವನೆ ಬಗ್ಗೆ ಪತ್ರ ಬರೆಯಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರು ತಿಳಿಸಿದರು.

ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಮತ್ತು ಸದಸ್ಯರು ಸಾರಿಗೆ ಮತ್ತು ಮುಜರಾಯಿ ಸಚಿವರನ್ನು ಭೇಟಿ ಮಾಡಿ ವಾಹನ-4 ಪೋರ್ಟಲ್ ಮೂಲಕ ರಾಜ್ಯದಲ್ಲಿ “ಭಾರತ್ ಟ್ಯಾಕ್ಸಿ” ಯೋಜನೆ (ಬೈಕ್ ಟ್ಯಾಕ್ಸಿ/ದ್ವಿಚಕ್ರ ವಾಹನ ಹೊರತುಪಡಿಸಿ) ಆಟೋ ಮತ್ತು ಟ್ಯಾಕ್ಸಿಗಳಿಗೆ ಕೂಡಲೇ ಜಾರಿಗೆ ಮನವಿ ಸಲ್ಲಿಸಿದ್ದರು.

ಖಾಸಗಿ ಅಗ್ರಿಗೇಟರ್ಗಳಿಂದ ಆಟೋ ಮತ್ತು ಟ್ಯಾಕ್ಸಿ ಚಾಲಕರು ಕಷ್ಟ ಅನುಭವಿಸುತ್ತಿರುವುದರಿಂದ ಕೇಂದ್ರ ಸರ್ಕಾರವು “ಭಾರತ್ ಟ್ಯಾಕ್ಸಿ” ಯೋಜನೆ ಪ್ರಾರಂಭಿಸಿದ್ದು, ರಾಜ್ಯದಲ್ಲಿ ಈ ಯೋಜನೆ ವಾಹನ್ ಪೋರ್ಟಲ್ ಮೂಲಕ ತರಬೇಕೆಂದು, ಅಗ್ರಿಗೇಟರ್ ವ್ಯವಸ್ಥೆಯಲ್ಲಿ ಚಾಲಕರಿಂದ ಪ್ರತಿ ಪ್ರಯಾಣಕ್ಕೆ 20% ರಿಂದ 35% ರವರೆಗೆ ಕಮೀಷನ್ ಪಡೆಯುತ್ತಿರುವುದರಿಂದ ಚಾಲಕರಿಗೆ ತೊಂದರೆಯುಂಟಾಗುತ್ತಿರುವುದಾಗಿ ಎಂದಿದ್ದರು.

ವಾಹನ-4 ಪೋರ್ಟಲ್ ಯೋಜನೆಯಿಂದ ನೋಂದಣಿ, ಪರವಾನಗಿ, ವಿಮೆ ಸುಲಭವಾಗಿ ಪಾರದರ್ಶಕವಾಗಿ ದೊರೆಯುವಂತಾಗುತ್ತದೆ. ಇದರಿಂದ ಪ್ರಯಾಣಿಕರ ಸುರಕ್ಷತೆ, ಅಪಘಾತ ಅಥವಾ ಅನಾಹುತದ ಸಂದರ್ಭದಲ್ಲಿ ಪರಿಹಾರ ದೊರೆಯುವುದಾಗಿ, (ಆದರೆ ಸದರಿ ಯೋಜನೆಯಲ್ಲಿ ಬೈಕ್ ಟ್ಯಾಕ್ಸಿ/ದ್ವಿಚಕ್ರ ವಾಹನವನ್ನು ಸೇರಿಸಬಾರದೆಂದು) ಸೇರಿಸಿದಲ್ಲಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸಿ ಪ್ರಯಾಣಿಕರ ಜೀವಭದ್ರತೆಗೆ ಅಪಾಯ ಉಂಟಾಗುತ್ತಿರುವ ಬಗ್ಗೆ ಪೊಲೀಸ್ ವರದಿಗಳು ಪೂರಕವಾಗಿರುತ್ತವೆಯೆಂದು‌ ತಮ್ಮ ಪತ್ರದಲ್ಲಿ ತಿಳಿಸಿರುತ್ತಾರೆ.


Share It

You cannot copy content of this page