ಬೆಂಗಳೂರು: ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ ಉರುಳಾಗಿ ಪರಿಣಮಿಸಿದ್ದು, ಇದೀಗ ನಿರೀಕ್ಷಣಾ ಜಾಮೀನು ರದ್ದಾಗಿದೆ.
ನ್ಯಾ ಸುನೀಲ್ ದತ್ತ ಯಾವದ್ ಅವರಿದ್ದ ಫೀಠದ ಮುಂದೆ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆದಿತ್ತು. ಆದರೆ, ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಪೊಲೀಸರು ಶಾಸಕ ಬೈರತಿ ಬಸವರಾಜ್ ಅವರನ್ನು ಬಂಧಿಸುವ ಸಾಧ್ಯತೆಯಿದೆ.

