ರಾಜಕೀಯ

ಡಿ. ಸುಧಾಕರ್ ಅವರ ಆರೋಗ್ಯ ಗೌಪ್ಯತೆ ಬಗ್ಗೆ ಕಾಂಗ್ರೆಸ್ ಪ್ರಶ್ನಿಸಿದ ಜೆಡಿಎಸ್, ಸಚಿವರ ಪುತ್ರನ ವಿರುದ್ಧ ವಾಗ್ದಾಳಿ

Share It

ಬೆಂಗಳೂರು: ಸಚಿವ ಡಿ. ಸುಧಾಕರ್ ಅವರ ಸ್ಥಿತಿ ಗಂಭೀರವಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ಮಧ್ಯೆ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ಹೇಳಿರುವ ಮಾತುಗಳು ಈಗ ರಾಜಕೀಯ ತಿರುವು ಪಡೆದುಕೊಂಡಿವೆ.

ಆ ವ್ಯಕ್ತಿ ಎಷ್ಟು ನೋವು ಅನುಭವಿಸುತ್ತಿದ್ದಾನೆ? ಕೆಲವು ವಿಷಯಗಳನ್ನು ಏಕೆ ಮರೆಮಾಡಲಾಗುತ್ತಿದೆ? ಎಂದು ಎಚ್ಡಿಕೆ ಪ್ರಶ್ನಿಸಿದ್ದರು. ಸಚಿವ ಡಿ. ಸುಧಾಕರ್ ಅವರ ಹೇಳಿಕೆಗೆ ಅವರ ಮಗ ಅಸಮಾಧಾನ ವ್ಯಕ್ತಪಡಿಸಿ ಈ ಸಂಬಂಧ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಇದರ ಬೆನ್ನಲ್ಲೇ, ಬಹಿರಂಗ ಪೋಸ್ಟ್ ಮಾಡಿರುವ ಜೆಡಿಎಸ್, ಸಚಿವರ ಮಗನಿಗೆ ಪ್ರತಿವಾದ ಮಾಡಿದೆ.

ಕುಮಾರಸ್ವಾಮಿ ಅವರ ದಿಟ್ಟ ಹೇಳಿಕೆಯಿಂದ ನನಗೆ ನೋವಾಗಿದೆ. ನನ್ನ ತಂದೆಯ ಅನಾರೋಗ್ಯವನ್ನು ರಾಜಕೀಯಕ್ಕಾಗಿ ಬಳಸಲಾಗಿದೆ. ನನ್ನ ತಂದೆ ಸಚಿವ ಡಿ. ಸುಧಾಕರ್ ಈಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಮತ್ತು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಅವರ ಚಿಕಿತ್ಸೆ ಮುಂದುವರೆದಿದೆ. ಅವರು ಶೀಘ್ರದಲ್ಲೇ ಗುಣಮುಖರಾಗುತ್ತಾರೆ ಎಂಬ ವಿಶ್ವಾಸ ನಮಗಿದೆ. ಸಚಿವರ ಮಗ ಸುಹಾಸ್ ವಿಡಿಯೋ ಬಿಡುಗಡೆ ಮಾಡಿದ್ದು, ಅದರಲ್ಲಿ ಸಿಎಂ, ಡಿಸಿಎಂ ಮತ್ತು ಸಚಿವರು ಆಸ್ಪತ್ರೆಗೆ ಬಂದು ಧೈರ್ಯ ತುಂಬಿದ್ದಾರೆ ಎಂದು ಹೇಳಿದ್ದರು.


Share It

You cannot copy content of this page