ಹಾಸನ; ಇನ್ನೆರಡು ಮೂರು ದಿನಗಳಲ್ಲಿ ತಮಿಳುನಾಡು ರಾಜ್ಯದಲ್ಲಿ ಸೃಷ್ಟಿಯಾಗಿರುವ ರಾಜಕೀಯ ಬಿಕ್ಕಟ್ಟು ಬಗೆಹರಿಯಬಹುದು. ದಶಕಗಳಿಂದ ರಾಜಕೀಯ ಎದುರಾಳಿಗಳಾಗಿ ಹೋರಾಟ ನಡೆಸಿರುವ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳು ಮೈತ್ರಿ ಮಾಡಿಕೊಂಡು ಸರಕಾರ ರಚಿಸುತ್ತವೆ ಎಂದು ನಾನಾದರೂ ಭಾವಿಸುವುದಿಲ್ಲ ಎಂದು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಯ ಅವರು ಹೇಳಿದರು.
ಹಾಸನ ಜಿಲ್ಲೆಯ ಮಾವಿನಕೆರೆ ರಂಗನಾಥ ಸ್ವಾಮಿ ಬೆಟ್ಟದಲ್ಲಿ ಇಂದು ಬೆಳಗ್ಗೆ ದೇವರ ದರ್ಶನ ಪಡೆದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಇನ್ನೆರಡು ಮೂರು ದಿನಗಳಲ್ಲಿ ತಮಿಳುನಾಡು ರಾಜ್ಯದಲ್ಲಿ ಸೃಷ್ಟಿಯಾಗಿರುವ ರಾಜಕೀಯ ಬಿಕ್ಕಟ್ಟು ಬಗೆಹರಿಯಬಹುದು. ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಟಿವಿಕೆಯನ್ನು ಹೊರತುಪಡಿಸಿ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳು ಅಧಿಕಾರಕ್ಕಾಗಿ ಕೈಜೋಡಿಸುತ್ತವೆ ಎಂದು ನಾನು ಭಾವಿಸುವುದಿಲ್ಲ. ಅಂತಹ ಸಾಧ್ಯತೆ ಗೋಚರಿಸುತ್ತಿಲ್ಲ ಎಂದು ಕುಮಾರಸ್ವಾಮಿಯವರು ಹೇಳಿದರು.
ತಮಿಳುನಾಡಿನಲ್ಲಿ ಸದ್ಯಕ್ಕೆ ಅಲ್ಲಿನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯಪಾಲರು ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಅಲ್ಲಿನ ಕಾನೂನು ಪಂಡಿತರ ಸಲಹೆಗಳನ್ನು ತೆಗೆದುಕೊಂಡು ಸರ್ಕಾರ ರಚನೆಯ ಬಗ್ಗೆ ಕ್ರಮಗಳನ್ನು ವಹಿಸುತ್ತಿದ್ದಾರೆ. ಮುಂದೆ ಏನೆಲ್ಲ ಕಾದು ನೋಡಬೇಕಾಗಿದೆ ಎಂದು ಅವರು ಹೇಳಿದರು.
ನಿಮಗೆ ಬೆಂಬಲವಿರುವ ಶಾಸಕರ ಸಹಿ ಇರುವ ಪುಟ್ಟಿಯೊಂದಿಗೆ ಬನ್ನಿ ಎಂದು ರಾಜ್ಯಪಾಲರು ವಿಜಯ್ ಅವರಿಗೆ ಸೂಚಿಸಿದ್ದಾರೆ. ಆ ರಾಜ್ಯದಲ್ಲಿನ ರಾಜಕೀಯ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯಪಾಲರು ಹೆಜ್ಜೆ ಇಡುತ್ತಿದ್ದಾರೆ. ಇಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡುವ ಪ್ರಶ್ನೆ ಬರುವುದಿಲ್ಲ ಎಂದು ಕೆಲಸ ಸಚಿವರು ಪ್ರಶ್ನೆ ಒಂದಕ್ಕೆ ಉತ್ತರಿಸಿದರು.
ವಿಜಯ್ ಅವರನ್ನು ದೇವರೇ ಕಾಪಾಡಬೇಕು; ವಿಜಯ್ ಅವರನ್ನು ದೇವರೇ ಕಾಪಾಡಬೇಕು ಎಂದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು, ತಮಿಳುನಾಡು ರಾಜ್ಯದ ಬಜೆಟ್ ಗಾತ್ರ 3.5 ಲಕ್ಷ ಕೋಟಿ ರೂಪಾಯಿ. ಆದರೆ ಇವರು ಭರವಸೆಗಳನ್ನು ನೀಡಿರುವ ಫ್ರೀ ಬೀಸ್ ಗಳಿಗೆ ಕಡಿಮೆ ಎಂದರೂ 6 ಲಕ್ಷ ಕೋಟಿ ರೂಪಾಯಿ ಬೇಕು. ಅಷ್ಟು ಹಣವನ್ನು ಎಲ್ಲಿಂದ ತರುತ್ತಾರೆ ಎಂದು ಅವರು ಪ್ರಶ್ನಿಸಿದರು.

