ಬೆಂಗಳೂರು: ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನೊಬ್ಬ ಗುಂಡಾಗಿರಿ ಮೆರೆದಿದ್ದು, ಕೊರಳ ಪಟ್ಟಿ ಹಿಡಿದು ಥಳಿಸಿರುವ ಆರೋಪ ಕೇಳಿಬಂದಿದೆ.
ಗೊಟ್ಟಿಗೆರೆ ಸಮೀಪ ಬೈಕ್ ಗೆ ಕೈ ಸ್ಯಾನ್ ಮಾಡಿ ನಿಲ್ಲಿಸಿದ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಎಂಬಾತ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ನನ್ನ ಗಡಿಯನ್ನೇ ತಡೆಯುತ್ತಿಯ ಎಂದು ಪೊಲೀಸ್ ಸಿಬ್ಬಂದಿ ಮೇಲೆ ಹರಿಹಾಯ್ದು, ಕಾಲಿನಿಂದ ಒಡ್ಡಿರುವುದಾಗಿ ಆರೋಪಿಸಲಾಗಿದೆ.
ಜೆಡಿಎಸ್ ಮುಖಂಡನ ವರ್ತನೆಗೆ ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ದೂರು ದಾಖಲಿಸಲಾಗಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಕಠಿಣ ಶಿಕ್ಷೆಗೆ ಒತ್ತಾಯಿಸಿದ್ದಾರೆ.

