ಸುದ್ದಿ

ರಾಜ್ಯದ ಶಾಲೆಗಳಲ್ಲಿ ಈಗಿನಿಂದಲೇ AI ಶಿಕ್ಷಣ ಜಾರಿ

Share It

ರಾಜ್ಯ ಸರ್ಕಾರವು ಶಾಲಾ ವಿದ್ಯಾರ್ಥಿಗಳನ್ನು ತಂತ್ರಜ್ಞಾನದ ಭವಿಷ್ಯಕ್ಕೆ ಸಜ್ಜುಗೊಳಿಸುವ ದೃಷ್ಟಿಯಿಂದ ಮಹತ್ವದ ಹೆಜ್ಜೆಯನ್ನಿಟ್ಟಿದೆ. 80ನೇ ಸ್ವಾತಂತ್ರ್ಯೋತ್ಸವದಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ಎಐ ಅಕ್ಷರ ಅಭಿಯಾನ’ ಮತ್ತು ‘ಕೋಡಿಂಗ್ ಗುರುಕುಲ’ ಕಾರ್ಯಕ್ರಮವನ್ನು ಘೋಷಿಸಿದ್ದಾರೆ. ಈ ಯೋಜನೆಯಡಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ 6ನೇ ತರಗತಿಯಿಂದಲೇ ಕೃತಕ ಬುದ್ಧಿಮತ್ತೆ (AI) ಶಿಕ್ಷಣವನ್ನು ಪರಿಚಯಿಸಲಾಗುತ್ತದೆ ಮತ್ತು ವಿದ್ಯಾರ್ಥಿಗಳಿಗೆ ಉಚಿತ ಕೋಡಿಂಗ್ ತರಗತಿಗಳನ್ನು ಆರಂಭಿಸಲಾಗುವುದು.

ಇದರ ಜೊತೆಗೆ, ಬೆಂಗಳೂರಿನಲ್ಲಿ ದೇಶದ ಪ್ರಪ್ರಥಮ ಸರ್ಕಾರಿ ಸ್ವಾಮ್ಯದ AI ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಶಿವಕುಮಾರ್ ತಿಳಿಸಿದ್ದಾರೆ. ಜನವರಿ 2027ರ ವೇಳೆಗೆ AI ಸರ್ಟಿಫಿಕೇಶನ್ ಕೋರ್ಸ್ಗಳು ಆರಂಭವಾಗಲಿವೆ. ಸರ್ಕಾರವು ಎಲ್ಕೆಜಿಯಿಂದ 12ನೇ ತರಗತಿಯವರೆಗೆ ಆಧುನಿಕ ಮೂಲಸೌಕರ್ಯ, ದ್ವಿಭಾಷಾ ಶಿಕ್ಷಣ, ಡಿಜಿಟಲ್ ತರಗತಿಗಳು ಮತ್ತು ವಿದ್ಯಾರ್ಥಿ ಸಾರಿಗೆ ಸೌಲಭ್ಯಗಳನ್ನು ಒದಗಿಸಲು 1,000 ಸರ್ಕಾರಿ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್ ಶಾಲೆಗಳು’ ಎಂದು ಅಭಿವೃದ್ಧಿಪಡಿಸಲು ಯೋಜಿಸಿದೆ.


Share It

You cannot copy content of this page