ಬೆಂಗಳೂರು: ವಿಧಾನ ಸಭೆಯಿಂದ ಪರಿಷತ್ಗೆ ಆಯ್ಕೆಗೆ ನಡೆಯುವ ಚುನಾವಣೆಯಲ್ಲಿ 11 ಜನ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ಅಧಿಕೃತ ಆದೇಶ ಹೊರಬಿದ್ದಿದೆ.
ಕಾಂಗ್ರೆಸ್ ಏಳು ಮತ್ತು ಬಿಜೆಪಿ ೩ ಹಾಗೂ ಜೆಡಿಎಸ್ನಿಂದ ಒಂದು ಸ್ಥಾನಕ್ಕೆ ಆಯ್ಕೆ ನಡೆದಿದ್ದು, ಪದವೀದರರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಫಲಿತಾಂಶ ಇಂದು ಸಂಜೆಯಷ್ಟರಲ್ಲಿ ಹೊರಬೀಳಲಿದೆ. ಈಗ 11 ಸದಸ್ಯರು ಮಾತ್ರ ಅವಿರೋಧ ಆಯ್ಕೆಯಾಗಿದ್ದು, ಆ ಪಟ್ಟಿಯನ್ನು ಎಂ.ಕೆ.ವಿಶಾಲಾಕ್ಷಿ ದೃಢೀಕರಿಸಿ ಆದೇಶ ಹೊರಡಿಸಿದ್ದಾರೆ.
ಕಾಂಗ್ರೆಸ್ ನಿಂದ ಐವಾನ್ ಡಿಸೋಜಾ, ಕೆ.ಗೋವಿಂದರಾಜು, ಜಗದೇವ್ ಗುತ್ತೇದಾರ್, ಬಲ್ಕೀಸ್ ಬಾನು, ಎನ್.ಎಸ್ ಬೋಸರಾಜು, ಡಾ. ಯತೀಂದ್ರ, ಎ ವಸಂತ್ ಕುಮಾರ್ ಆಯ್ಕೆಯಾಗಿದ್ದರು. ಬಿಜೆಪಿಯಿಂದ ಸಿ.ಟಿ.ರವಿ, ಮುಳೆ ಮಾರುತಿ ರಾವ್, ಎನ್.ರವಿಕುಮಾರ್ ಆಯ್ಕೆಯಾಗಿದ್ದಾರೆ. ಜೆಡಿಎಸ್ನಿಂದ ನಾಲ್ಕು ಬಾರಿ ಚುನಾವಣೆಯಲ್ಲಿ ಸೋಲು ಕಂಡಿದ್ದ ಎನ್.ಜವರಾಯೀಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಅ

