ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜೂ.9ಕ್ಕೆ (ಭಾನುವಾರ) ಸಂಜೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಶನಿವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ಹೇಳಲಾಗಿತ್ತು, ಆದರೆ ಅಧಿಕೃತವಾಗಿ ಪ್ರಧಾನಿ ಮೋದಿ ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಬುಧವಾರ ನಡೆದ NDA ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇನ್ನು ಮೋದಿಯನ್ನು ಎನ್ಡಿಎ ನಾಯಕನಾಗಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಸಭೆ ನಂತರ ಮೋದಿ ಹಾಗು ಎನ್ ಡಿಎ ನಾಯಕರು ರಾಷ್ಟ್ರಪತಿಗೆ ಸರ್ಕಾರ ರಚನೆ ಬಗ್ಗೆ ಹಕ್ಕು ಮಂಡನೆ ಮಾಡಿದ್ದಾರೆ.
ಜವಾಹರಲಾಲ್ ನೆಹರು ನಂತರ ಸತತ 3ನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ದಕ್ಷಿಣ ಏಷ್ಯಾದ ಹಲವು ನಾಯಕರನ್ನು ಆಹ್ವಾನಿಸಲಾಗಿದ್ದು, ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಈಗಾಗಲೇ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಖಾತ್ರಿಪಡಿಸಿದ್ದಾರೆ.
ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ‘ಪ್ರಚಂಡ’, ಅವರ ಭೂತಾನ್ ಕೌಂಟರ್ ಟ್ಶೆರಿಂಗ್ ಟೊಬ್ಗೇ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಅವರಿಗೂ ಆಹ್ವಾನ ಕಳುಹಿಸಲಾಗಿದೆ. 2024ರ ಲೋಕಸಭೆ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದ್ದು, 2019ರಲ್ಲಿ 303 ಸ್ಥಾನ ಪಡೆದಿದ್ದ ಬಿಜೆಪಿ ಈ ಬಾರಿ 240 ಸ್ಥಾನಗಳಿಗೆ ಇಳಿದಿದೆ. ಕಳೆದ ಬಾರಿ ಎನ್ಡಿಎ 352 ಸ್ಥಾನಗಳನ್ನು ಪಡೆದಿತ್ತು, ಆದರೆ ಈ ಬಾರಿ ಆ ಸಂಖ್ಯೆ 293ಕ್ಕೆ ಇಳಿದಿದೆ.

2019ರಲ್ಲಿ ಪ್ರಧಾನಿ ಮೋದಿ ನೇತೃತ್ವ ಸರ್ಕಾರ ರಚನೆ ಮಾಡಲು ಯಾರ ಬೆಂಬಲವು ಬೇಕಿರಲಿಲ್ಲ. ಆದರೆ ಈ ಬಾರಿ ಸರ್ಕಾರ ರಚನೆಗೆ ಮಿತ್ರಪಕ್ಷಗಳು ಬೆಂಬಲ ಬೇಕು ಹಾಗೂ ಈ ಬಾರಿ ಸರ್ಕಾರವನ್ನು ಮಿತ್ರಪಕ್ಷ ಅವಲಂಬಿಸಿ ಮಾಡಬೇಕಿದೆ. ಮತ್ತು ಇದರಲ್ಲಿ ದೊಡ್ಡ ಪಾಲು ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಹೊಂದಿರುವ ಕಾರಣ ಅವರು ಬೆಂಬಲ ಅಗತ್ಯ ಇದೆ ಎಂದು ಹೇಳಲಾಗಿದೆ.
ಹಿಂದೆ ಕಾಂಗ್ರೆಸ್ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು, ಈ ಬಾರಿ ಬಿಜೆಪಿ ಜತೆಗೆ ಸೇರಿಕೊಂಡಿದ್ದಾರೆ. ಆಂಧ್ರ ಪ್ರದೇಶದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಚಂದ್ರಬಾಬು ನಾಯ್ಡು ಬೆಂಬಲವನ್ನು ನೀಡಿತ್ತು. ಇನ್ನು ಬಿಹಾರದಲ್ಲೂ ಬಿಜೆಪಿ ನಿತೀಶ್ ಕುಮಾರ್ ಅವರಿಗೆ ಬೆಂಬಲ ನೀಡಿದ್ದಾರೆ. ಇದರ ಜತೆಗೆ ಈ ಬಾರಿ ಮೋದಿ ಸರ್ಕಾರದಲ್ಲಿ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ಹೇಳಲಾಗಿದೆ.

