ಬೆಂಗಳೂರು: ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತೆ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಷರತ್ತುಬದ್ಧ ಜಾಮೀನು ನೀಡಿದೆ.
ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತೆ ಮಹಿಳೆಯನ್ನು ಅಪಹರಣ ಮಾಡಿದ ಆರೋಪ ಪ್ರಕರಣದಲ್ಲಿ ನೋಟಿಸ್ ನೀಡಿದ್ದರೂ ಎಸ್ಐಟಿ ತನಿಖಾ ತಂಡದ ವಿಚಾರಣೆಗೆ ಈವರೆಗೆ ಹಾಜರಾಗದ ಭವಾನಿ ರೇವಣ್ಣ ಅವರಿಗೆ ಅರೆಸ್ಟ್ ವಾರಂಟ್ ಜಾರಿಯಾಗಿತ್ತು. ಎಸ್ಐಟಿ ವಿಚಾರಣೆಗೆ ಹಾಜರಾಗದ ಭವಾನಿ ರೇವಣ್ಣ ಅವರು ಈ ಪ್ರಕರಣದಲ್ಲಿ ಜಾಮೀನು ನೀಡುವಂತೆ ಹೈಕೋರ್ಟ್ ಮೊರೆ ಹೋಗಿದ್ದರು. ಈ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಇಂದು ಭವಾನಿ ರೇವಣ್ಣ ಅವರಿಗೆ ಷರತ್ತುಬದ್ಧ ಜಾಮೀನು ನೀಡಿತು.

ಜಾಮೀನಿಗೆ ಷರತ್ತುಗಳಿವು…
ಕೆ.ಆರ್.ನಗರ ತಾಲ್ಲೂಕು ಮತ್ತು ಹಾಸನ ಜಿಲ್ಲೆಯ ವ್ಯಾಪ್ತಿಯೊಳಗೆ ಆರೋಪಿ ಭವಾನಿ ರೇವಣ್ಣ ಇರಬಾರದು.
ಇಂದು ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಪ್ರಕರಣದ ಎಸ್ಐಟಿ ವಿಚಾರಣೆಗೆ ಆರೋಪಿ ಭವಾನಿ ರೇವಣ್ಣ ಕಡ್ಡಾಯ ಹಾಜರಾಗಲೇಬೇಕು. ಎಸ್ಐಟಿ ಇಂದು (ಜೂನ್ 7 ರ) ಸಂಜೆ 5 ಗಂಟೆಯೊಳಗೆ ಪ್ರಕರಣದ ವಿಚಾರಣೆ ಮುಗಿಸಬೇಕು.

