ಅಪರಾಧ ಸುದ್ದಿ

ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ ಕಲಬುರಗಿ ಮೂಲದ ವಿಜಯ್ ಕುಮಾರ್ ಅಂತ್ಯಕ್ರಿಯೆ

Share It

ಕಲಬುರಗಿ: ಕುವೈತ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಾವನ್ನಪ್ಪಿರುವ ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದ ವಿಜಯಕುಮಾರ ಅಂತ್ಯ ಸಂಸ್ಕಾರವನ್ನು ಸ್ವಗ್ರಾಮ ಸರಸಂಬಾದಲ್ಲಿ ನೆರವೇರಿಸಲಾಯಿತು.

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಸರಸಂಬಾ ಗ್ರಾಮಕ್ಕೆ ಮೃತ ವಿಜಯಕುಮಾರ ಮೃತದೇಹವನ್ನು , ತಡರಾತ್ರಿ ತರಲಾಯೊತು. ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನೆರವೇರಿತು. ಮಗನ ಸಾವಿನಿಂದ ವಿಜಯಕುಮಾರ ಕುಟುಂಬದಲ್ಲಿ ದು:ಖ ಮಡುಗಟ್ಟಿದೆ.

ಕುವೈತ್ ನಲ್ಲಿ ಟ್ರಕ್ ಡ್ರೈವರ್ ಆಗಿ ದುಡಿದು, ಮನೆಗೆ ಹಣ ಕಳುಹಿಸುತ್ತಿದೆ ಮನೆಯ ಆಧಾರ ಸ್ತಂಭವಾಗಿದ್ದ ವಿಜಯಕುಮಾರ್ ನನ್ನು ಕಳೆದುಕೊಂಡ ಕುಟುಂಬ ಸದಸ್ಯರ ರೋಧನೆ ಮುಗಿಲು ಮುಟ್ಟಿದೆ.

ಇಡೀ ಸರಸಂಬಾ ಗ್ರಾಮದಲ್ಲಿಯೇ ಸ್ಮಶಾನ ಮೌನ ಆವರಿಸಿದ್ದು, ಗ್ರಾಮಸ್ಥರು ಕಂಬನಿ ಮಿಡಿದರು.


Share It

You cannot copy content of this page