ಸುದ್ದಿ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಲು ಹೋಗಿ ನವ ವಿವಾಹಿತ ನೀರುಪಾಲು

Share It

ಬೆಳಗಾವಿ: ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಹರಿಯುತ್ತಿರುವ ಕೃಷ್ಣಾ ನದಿಗೆ ಬಾಗಿನ ಅರ್ಪಿಸಲು ತೆರಳಿದ್ದ ನವ ವಿವಾಹಿತ ನೀರಿನ ಸೆಳವಿಗೆ ಸಿಲುಕಿ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ರೋಹನ ಪಾಟೀಲ (28)ಮೃತ ಪಟ್ಟವರು. ಇವರಿಗೆ ಮದುವೆಯಾಗಿ ಕೇವಲ ಮೂರು ತಿಂಗಳಾಗಿತ್ತು. ಸೋಮವಾರ ಕೃಷ್ಣಾ ನದಿಯ ಹಿನ್ನೀರಿಗೆ ಬಾಗಿನ ಅರ್ಪಿಸಲು ತೆರಳಿದ್ದಾಗ ಆಯತಪ್ಪಿ ನೀರು ಪಾಲಾಗಿದ್ದಾರೆ. ಈಜಲು ಸಹ ಬಾರದ ಕಾರಣ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.


Share It

You cannot copy content of this page