ಬೆಂಗಳೂರು: ನಗರದ ಹೊರವಲಯದ ಬಿಡದಿಯಲ್ಲಿ ನಗರದ ಸಿಸಿಬಿ ಇನ್ಸ್ ಪೆಕ್ಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ನಗರದ ಅಪರಾಧ ವಿಭಾಗದ ಆರ್ಥಿಕ ವ್ಯವಹಾರಗಳ ಶಾಖೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ತಿಮ್ಮೇಗೌಡ ಎಂಬುವವರೇ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಆದರೆ, ಆತ್ಮಹತ್ಯೆಗೆ ಕಾರಣ ಏನೆಂಬುದು ಗೊತ್ತಾಗಿಲ್ಲ.
ಸ್ಥಳಕ್ಕೆ ಕುಂಬಳಗೋಡು ಪೊಲೀಸ್ ಠಾಣಾ ಪೊಲೀಸರು ಆಗಮಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

