ರಾಜಕೀಯ ಸುದ್ದಿ

BELAGAVI AIRPORT ಡಿಮಾಂಡ್ ಸರ್ವೆ ಕೈಗೊಳ್ಳಲು ಮಹತ್ವದ ಸಭೆ ನಡೆಸಿದ ಸಂಸದ ಜಗದೀಶ ಶೆಟ್ಟರ್

Share It

ರಾಜಕೀಯ ಪುನರ್ಜನ್ಮ ಕೊಟ್ಟ ಕರ್ಮಭೂಮಿಯ ಋಣ ತೀರಿಸಲು ಮುಂದಾದ ಸಂಸದ

ಬೆಳಗಾವಿ : ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಲು ಅವಶ್ಯಕವೆನಿಸುವ ‘ಡಿಮಾಂಡ್ ಸರ್ವೆ’ ಕೈಗೊಳ್ಳುವಂತೆ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಏರ್‌ಪೋರ್ಟ್ ಅಧಿಕಾರಿಗಳ ಸಭೆಯಲ್ಲಿ ಸೂಚಿಸಿದರು.

ಬೆಳಗಾವಿ ವೇಗದಲ್ಲಿ ಬೆಳೆಯುತ್ತಿರುವ ನಗರವಾಗಿದ್ದು, ಬೆಂಗಳೂರು ನಂತರ ಎರಡನೇ ರಾಜಧಾನಿ ಎನಿಸಿಕೊಂಡಿದೆ. ವಿಮಾನ ಸೇವೆಯಲ್ಲಿ ಬೆಂಗಳೂರು, ಮಂಗಳೂರು ವಿಮಾನ ನಿಲ್ದಾಣಗಳ ನಂತರ ಮೂರನೇ ಅತಿ ದೊಡ್ಡ ನಿಲ್ದಾಣವಾಗಿ ಹೆಸರು ಮಾಡಿದ್ದು, ಇಲ್ಲಿಂದ ಈಗಾಗಲೇ ದಿನನಿತ್ಯ 10 ವಿಮಾನಗಳು ದೇಶದ ವಿವಿಧ ನಗರಗಳಿಗೆ ಸಂಪರ್ಕ ಕಲ್ಪಿಸುವಲ್ಲಿ ಯಶಸ್ವಿಯಾಗಿವೆ. ಮಹಾರಾಷ್ಟ್ರದ ಕೊಲ್ಲಾಪುರ ನಗರದಿಂದ ಹಾಗೂ ಕರ್ನಾಟಕದ ಬೆಳಗಾವಿ ಜಿಲ್ಲೆಗೆ ಹತ್ತಿರವಿರುವ ಬಾಗಲಕೋಟೆ, ವಿಜಯಪುರ, ಧಾರವಾಡ ಜಿಲ್ಲೆಯಿಂದಲೂ ಸಹ ವಿಮಾನ ಪ್ರಯಾಣಿಕರು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ವಿವಿಧ ನಗರಗಳಿಗೆ ಪ್ರವಾಸ ಮಾಡುತ್ತಿರುವುದು ವಿಶೇಷ ಎಂದು ಸಂಸದ ಜಗದೀಶ ಶೆಟ್ಟರ್ ಸಭೆಯಲ್ಲಿ ಪ್ರಸ್ತಾಪಿಸಿದರು.

ಬೆಳಗಾವಿ ವಿಮಾನ ನಿಲ್ದಾಣ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೆ ಏರಿಸಲು ಎಲ್ಲ ಅರ್ಹತೆ ಹೊಂದಿದ್ದು ಹಾಗೂ ಸಾರ್ವಜನಿಕರ ಬೇಡಿಕೆಯು ಸಹ ಆಗಿದ್ದು, ಈ ಕುರಿತು ಪ್ರಾರಂಭದಲ್ಲಿ ಅಗತ್ಯವೆನಿಸಿರುವ ‘ಡಿಮಾಂಡ್ ಸರ್ವೆ’ ಕೈಗೊಳ್ಳುವ ಬಗ್ಗೆ ಬೆಳಗಾವಿ ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕರು ಮುಂದಿನ ಕ್ರಮವನ್ನು ಜರುಗಿಸಲು ಸಭೆಯಲ್ಲಿ ಸೂಚಿಸಿದರು.

ಸಭೆಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಬೆಳಗಾವಿ ನಗರ (ಉತ್ತರ) ಶಾಸಕ ಆಸಿಫ್ (ರಾಜು) ಸೇಠ, ಜಿಲ್ಲಾಧಿಕಾರಿ ಮಹಮ್ಮದ್ ರೋಶನ್, ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕ ತ್ಯಾಗರಾಜನ್ ಹಾಜರಿದ್ದರು.


Share It

You cannot copy content of this page