ಅಪರಾಧ ರಾಜಕೀಯ ಸುದ್ದಿ

ಶ್ಯಾಮನೂರು ಶಿವಶಂಕರಪ್ಪ ನಕಲಿ ಪತ್ರ ಬಳಸಿ, ಆಪ್ತಸಹಾಯಕ ಹುದ್ದೆ ಪಡೆದ ಮಹಿಳೆ: ‘ಎಫ್ಐಆರ್’ ದಾಖಲು

Share It


ಬೆಂಗಳೂರು : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಸಹಿ ಮತ್ತು ಲೆಟರ್ ಹೆಡ್ ದುರ್ಬಳಕೆ ಮಾಡಿಕೊಂಡು ಆಪ್ತ ಸಹಾಯಕರ ಹುದ್ದೆ ಪಡೆಯಲು ಯತ್ನಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ವಿಧಾನಸಭಾ ಸಚಿವಾಲಯದ ಅಧೀನ ಕಾರ್ಯದರ್ಶಿಗಳು ನೀಡಿರುವ ದೂರಿನನ್ವಯ ವಿನುತಾ ಕೆ.ಸಿ ಎಂಬುವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಸೋಲೂರು‌ ಮೂಲದ ವಿನುತಾ ಕೆ.ಸಿ ಅವರನ್ನ ತಮ್ಮ ಆಪ್ತ ಸಹಾಯಕರನ್ನಾಗಿ ನೇಮಿಸುವಂತೆ ಶಾಸಕರು ಮನವಿ ಮಾಡಿರುವಂತೆ ಅವರ ಸಹಿ ಇರುವ ಲೆಟರ್ ಹೆಡ್ಅನ್ನ ವಿಧಾನಸಭಾ ಸಚಿವಾಲಯಕ್ಕೆ ಸಲ್ಲಿಸಲಾಗಿದೆ.

ಶಾಮನೂರು ಶಿವಶಂಕರಪ್ಪ ಅವರೇ ನೀಡಿರುವ ಪತ್ರವೆಂದು ಭಾವಿಸಿದ್ದ ಸಚಿವಾಲಯ ಅದರಂತೆ ಆಪ್ತ ಸಹಾಯಕರನ್ನಾಗಿ ನೇಮಿಸಿ ಆದೇಶಿಸಿತ್ತು. ಬಳಿಕ ತಾವು ಪತ್ರ ನೀಡಿಲ್ಲ, ಅದು ನಕಲಿ ಎಂದು ಶಾಸಕರು ವಿಧಾನಸಭಾ ಸಚಿವಾಲಯದ ಗಮನಕ್ಕೆ ತಂದಿದ್ದಾರೆ.

ಸದ್ಯ ವಿಧಾನಸಭಾ ಸಚಿವಾಲಯದ ಅಧೀನ ಕಾರ್ಯದರ್ಶಿ ಲಲಿತಾ ಅವರು ನೀಡಿರುವ ದೂರಿನನ್ವಯ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.


Share It

You cannot copy content of this page