ಕೂಲಿಂಗ್ ಗ್ಲಾಸ್ ಜತೆ ಬಳ್ಳಾರಿ ಜೈಲಿಗೆ ಎಂಟ್ರಿ ಕೊಟ್ಟ ದರ್ಶನ್: ಸಿಬ್ಬಂದಿಗೆ ನೊಟೀಸ್

Share It

ಬಳ್ಳಾರಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೇಸ್​​ನಲ್ಲಿ ಎ2 ಆರೋಪಿಯಾಗಿ ಕೋರ್ಟ್ ‌ಆದೇಶದ ಮೇರೆಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿ ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್ ತೂಗುದೀಪ್ ಅವರು ಜೈಲಿನ ಒಳಗೆ ಚೇರ್​​ನಲ್ಲಿ ಕುಳಿತಿದ್ದ ಫೋಟೋ ವೈರಲ್ ಆಗಿತ್ತು. ಈ ಬಗ್ಗೆ ಕೋರ್ಟ್ ನಲ್ಲಿ ವಿಚಾರಣೆಯಾಗಿ ತೀರ್ಪು‌ ಬಂದ ಹಿನ್ನೆಲೆಯಲ್ಲಿ ನಟ ದರ್ಶನ್​ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಇಂದು ನಸುಕಿನ ಜಾವ ಕನ್ನಡದ ಖ್ಯಾತ ನಟನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಈಗ ನಟ ಬಳ್ಳಾರಿ ಜೈಲಿಗೆ ಕೂಲಿಂಗ್ ಗ್ಲಾಸ್ ಸಮೇತ ಎಂಟ್ರಿ ಕೊಟ್ಟಿದ್ದು ಭಾರೀ ಚರ್ಚೆಯಾಗುತ್ತಿದೆ.

ನಟ ದರ್ಶನ್ ಬಳ್ಳಾರಿ ಜೈಲಿಗೆ ಗ್ರ್ಯಾಂಡ್ ಎಂಟ್ರಿ ವಿಚಾರವಾಗಿ ದರ್ಶನ್‌ಗೆ ಕೂಲಿಂಗ್ ಗ್ಲಾಸ್ ಹಾಕಲು ಅವಕಾಶ ನೀಡಿದ ಬೆಂಗಾವಲು ಪಡೆಗೆ ನೋಟಿಸ್ ನೀಡಲಾಗಿದೆ. ನೋಟಿಸ್ ನೀಡಲು ಬಂದೀಖಾನೆ ಇಲಾಖೆ ಉತ್ತರ ವಲಯ ಡಿಐಜಿ ಟಿ‌.ಪಿ ಶೇಷಾ ಸಿದ್ಧತೆ ಮಾಡಿದ್ದಾರೆ.

ಈ ಬಗ್ಗೆ ಡಿಐಜಿ ಟಿ.ಪಿ ಶೇಷಾ ಮಾಹಿತಿ ನೀಡಿದ್ದು, ಯಾವುದೇ ಕಾರಣಕ್ಕೂ ಜೈಲಿನಲ್ಲಿ ಕೂಲಿಂಗ್ ಗ್ಲಾಸ್‌ನಂಥ ವಸ್ತುಗಳನ್ನು ಒಯ್ಯುವ ಹಾಗಿಲ್ಲ. ನಿಯಮ ಉಲ್ಲಂಘಿಸಿದ ಬೆಂಗಾವಲು ಪಡೆಗೆ ನೋಟಿಸ್ ನೀಡಲಾಗುವುದು ಎಂದು ಹೇಳಿದ್ದಾರೆ.


Share It

You May Have Missed

You cannot copy content of this page