ಶಿವಮೊಗ್ಗ: ಧಾರಾಕಾರ ಮಳೆಯಿಂದಾಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಪ್ರಪಾತಕ್ಕೆ ಉರುಳಿರುವ ಘಟನೆ ಆಗುಂಬೆ ಘಾಟ್ನ ಆರನೇ ತಿರುವಿನಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಆರನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಕಾರು ಉಡುಪಿ ಕಡೆಗೆ ತೆರಳುತ್ತಿದ್ದು, ಮಳೆಯಿಂದಾಗಿ ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡು ಉರುಳಿ ಬಿದ್ದಿದೆ ಎನ್ನಲಾಗಿದೆ.
ಕಾರಿನಲ್ಲಿದ್ದ ತಾಯಿ ಮತ್ತು ಮಗುವನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.