ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಇಂದು ನಡೆದ ಕಾರ್ಯಾಚರಣೆಯಲ್ಲಿ ಭೀಮನಕುಪ್ಪೆ ಗ್ರಾಮದಲ್ಲಿ ಸುಮಾರು ರೂ. 12 ಕೋಟಿ ಆಸ್ತಿಯನ್ನು ವಶಪಡಿಸಿಕೊಂಡಿದೆ.
ಬೆಂಗಳೂರು ದಕ್ಷಿಣ ತಾಲ್ಲೂಕು, ಕೆಂಗೇರಿ ಹೋಬಳಿ, ಭೀಮನಕುಪ್ಪೆ ಗ್ರಾಮದ ಸರ್ವೆ ನಂ. 206/1ರಲ್ಲಿನ 1 ಎಕರೆ 26 ಗುಂಟೆ ಪ್ರದೇಶದಲ್ಲಿ ಅನಧಿಕೃವಾಗಿ ನಿರ್ಮಿಸಿಕೊಂಡಿದ್ದ ಕಂದಾಯ ನಿವೇಶನ ಹಾಗೂ ಶೆಡ್ಗಳನ್ನು ತೆರವುಗೊಳಿಸಿ, ಸುಮಾರು 12 ಕೋಟಿ ಬೆಲೆ ಬಾಳುವ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿತು.
ಈ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ನಾಡಪ್ರಭು ಕೆಂಪೇಗೌಡ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಇವರನ್ನು ಒಳಗೊಂಡಂತೆ ಸ್ಥಳೀಯ ಪೊಲೀಸ್ ಇಲಾಖೆ ಸಹಕಾರದೊಂದಿಗೆ ನೆರವೇರಿಸಲಾಯಿತು.