ಅಪರಾಧ ಸುದ್ದಿ

ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರನ ಸಾವು

Share It

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರನೊಬ್ಬ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರದ ಹೆಸರುಘಟ್ಟದ ಬಳಿಯ ಬೆನಕ ಚೌಟ್ರಿ ಬಳಿ ನಡೆದಿದೆ.

ಘಟನೆಯಲ್ಲಿ ಕಾಮಾಕ್ಷಿಪಾಳ್ಯದ ನಿವಾಸಿ ಜೆ. ನಾಗರಾಜ್ ಎಂಬುವವರು ಮೃತಪಟ್ಟಿದ್ದಾರೆ. ಈತ ಕೆಲಸದ ಮೇಲೆ ಹೆಸರುಘಟ್ಟಕ್ಕೆ ಹೋಗಿದ್ದು, ಬಿಎಂಟಿಸಿ ಬಸ್ ಆತನಿಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ರಸ್ತೆಗೆ ಬಿದ್ದ ನಾಗರಾಜ್ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸೋಲದೇವನಹಳ್ಳಿ ಠಾಣೆ ಪೊಲೀಸರು, ಬಸ್ ಸಮೇತ ಚಾಲಕ ನರಸಿಂಹಮೂರ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.


Share It

You cannot copy content of this page