ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಜಮೀನಿನ ಕೊಳವೆ ಬಾವಿಗೆ ಬಿದ್ದಿರುವ ಎರಡು ವರ್ಷದ ಬಾಲಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದೆ.
ಬುಧವಾರ ಸಂಜೆ 6 ಗಂಟೆ ವೇಳೆಯಲ್ಲಿ ಲಚ್ಯಾಣ ಗ್ರಾಮದ ಕೊಳವೆಬಾವಿಗೆ ಸಾತ್ವಿಕ್ ಎಂಬ ಎರಡು ವರ್ಷದ ಬಾಲಕ ಬಿದ್ದು ಹೋಗಿದ್ದ. ಬಾಲಕನ ರಕ್ಷಣೆಗೆ ಸತತ 12 ಗಂಟೆಗಳಿಂದ ಕಾಯರ್ಾಚರಣೆ ನಡೆಯುತ್ತಿದೆ.
ಸತೀಶ ಮುಜಗೊಂಡ ಹಾಗೂ ಪೂಜಾ ಮುಜಗೊಂಡ ಎಂಬುವರ ಪುತ್ರ ಸಾತ್ವಿಕ್ ಆಟವಾಡುತ್ತಾ ಬಾವಿಗೆ ಬಿದ್ದಿದ್ದಾನೆ. ಬಾಲಕನ ರಕ್ಷಣೆಗೆ ಬುಧವಾರ ಸಂಜೆ 6 ಗಂಟೆಯಿಂದಲೇ ಕಾಯರ್ಾಚರಣೆ ಶುರುವಾಗಿದ್ದು, ರಕ್ಷಣಾ ತಂಡವು ಸುಮಾರು 20 ಅಡಿಗಳಷ್ಟು ಡಿಗ್ಗಿಂಗ್ ಮಾಡಿದೆ.
ಅಲ್ಲಿಂದ ಬಾಲಕ ಇರುವ ಕಡೆಗೆ 5 ಅಡಿಗಳಷ್ಟು ಸುರಂಗ ಕೊರೆಯಲಾಗುತ್ತಿದೆ. ಈಗಾಗಲೇ ಅಡ್ಡಡ್ಡ 3 ಅಡಿಗಳಷ್ಟು ಸುರಂಗ ಮಾಡಲಾಗಿದೆ. ಆದರೆ, ಕಾರ್ಯಾಚರಣೆಗೆ ಗಟ್ಟಿಯಾದ ಕಲ್ಲು ಬಂಡೆಗಳು ಅಡ್ಡಿಯಾಗುತ್ತಿವೆ. ಬಂಡೆಗಳನ್ನು ಬ್ರೇಕ್ ಮಾಡುತ್ತ ಕಾರ್ಯಾಚರಣೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.
ಮಗುವಿನ ಉಸಿರಾಟಕ್ಕೆ ತೊಂದರೆಯಾಗದಂತೆ ಆಕ್ಸಿಜನ್ ಪೂರೈಕೆ ಮಾಡಲಾಗಿದೆ. ಸ್ಥಳದಲ್ಲಿ ಆರೋಗ್ಯಾಧಿಕಾರಿಗಳ ನೇತೃತ್ವದ ವೈದ್ಯರ ತಂಡ ಕರ್ತವ್ಯದಲ್ಲಿ ತೊಡಗಿದೆ. ಆಂಬ್ಯುಲೆನ್ಸ್ ಕೂಡ ತಂದು ಇರಿಸಿಕೊಳ್ಳಲಾಗಿದೆ. ಸಾತ್ವಿಕ್ ಬದುಕಿ ಬರಲೆಂದು ಪೂಜೆ, ಪುನಸ್ಕಾರ ನಡೆಯುತ್ತಿವೆ. ಲಚ್ಯಾಣ ಗ್ರಾಮದ ಸಿದ್ದಪ್ಪ ಮಹಾರಾಜರ ಗದ್ದುಗೆಯಲ್ಲಿಯೂ ಗ್ರಾಮದ ಯುವಕರು ವಿಶೇಷ ಪೂಜೆ ಸಲ್ಲಿಸಿ ಪ್ರಾಥರ್ಿಸಿದ್ದಾರೆ.
ಸ್ಥಳೀಯ ಅಗ್ನಿಶಾಮಕ ದಳ, ಬೆಳಗಾವಿ, ಕಲಬುರಗಿ ಹಾಗೂ ಹೈದರಾಬಾದ್ನಿಂದ ಆಗಮಿಸಿರುವ ಎಸ್ಡಿಆರ್ಎಫ್ ತಂಡಗಳು, ಕೊಳವೆ ಬಾವಿ ಕೊರೆಯುವ ನುರಿತ ತಂಡಗಳಿಂದ ನಿರಂತರ ಕಾಯರ್ಾಚರಣೆ ನಡೆಯುತ್ತಿದೆ. ರಕ್ಷಣಾ ಕಾರ್ಯಕ್ಕೆ ಎರಡು ಹಿಟಾಚಿ, ಬ್ರೇಕರ್ಗಳು ಹಾಗೂ ಟ್ರ್ಯಾಕ್ಟರ್ಗಳನ್ನು ಬಳಕೆ ಮಾಡಲಾಗುತ್ತಿದೆ. ಕಾರ್ಯಾಚರಣೆ ನೋಡಲು ಜನರು ಕಿಕ್ಕಿರಿದು ಸೇರಿದ್ದಾರೆ