ಉಪಯುಕ್ತ ಸುದ್ದಿ

ಕಾಂಗ್ರೆಸ್ ಸರ್ಕಾರ ಕಾರ್ಮಿಕರ ಪರ ಸರ್ಕಾರ: ಸಚಿವ ಸಂತೋಷ್ ಲಾಡ್

Share It

ವಿಜಯಪುರ: ಆಡಳಿತರೂಢ ಕಾಂಗ್ರೆಸ್ ಸರ್ಕಾರ ನೀಡಿದ ಪಂಚಯೋಜನೆಗಳನ್ನು ಟೀಕಿಸುತ್ತಿರುವ ಬಿಜೆಪಿ, ಕಾರ್ಮಿಕ ವರ್ಗಕ್ಕೇನೂ ಮಾಡದೆ ಇರೋದು ಬೇಸರದ ಸಂಗತಿ. ಹೀಗಾಗಿ ಕಾರ್ಮಿಕರ ಪರವಾಗಿ ಕೆಲಸ ಮಾಡಲು, ಕಾರ್ಮಿಕರ ಬದುಕನ್ನು ಹಸನಾಗಿಸಲು ಕಾಂಗ್ರೆಸ್ ಸರ್ಕಾರ ಸದಾ ಸಿದ್ದವಿದೆ ಎಂದು ಸಂತೋಷ್ ಲಾಡ್ ತಿಳಿಸಿದರು.

ವಿಜಯಪುರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಕಾರ್ಮಿಕ ಇಲಾಖೆ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರಾತಾ ಮಂಡಳಿ, ಸಾರಿಗೆ ಇಲಾಖೆ ಆಶ್ರಯದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಇಂದು ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಮಿಕ ಇಲಾಖೆಯ ಹೊಸ ಯೋಜನೆಗಳನ್ನು ಎಲ್ಲಾ ರೀತಿಯ ಕಾರ್ಮಿಕರಿಗೆ ಮುಟ್ಟಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ಅಯೊಜಿಸಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಕಾರ್ಯಕ್ರಮದ ಉದ್ದೇಶವನ್ನು ಸ್ಪಷ್ಟಪಡಿಸಿದರು. ಕಾರ್ಮಿಕ ಇಲಾಖೆಯಡಿ ಸಾಂಸ್ಕೃತಿಕ ಕಾರ್ಮಿಕರ ಕಾರ್ಯಕರ್ತರ ಕಾಯಿದೆಗೆ ಉದ್ದೇಶಿಸಿದ್ದು, ಅದಕ್ಕಾಗಿ ನಿಯಮಗಳನ್ನು ಸಿದ್ಧಪಡಿಸುವ ಕೆಲಸವನ್ನು ಇಲಾಖೆ ಈಗಾಗಲೇ ಮಾಡುತ್ತಿದೆ ಎಂದು ಕಾರ್ಮಿಕ ವರ್ಗಕ್ಕೆ ಸಂತೋಷ್ ಲಾಡ್ ಅಭಯ ನೀಡಿದರು.

ಆಶಾದೀಪ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ ನಿರುದ್ಯೋಗಿ ಯುವಕರಿಗೆ ವಿವಿಧ ಸಂಸ್ಥೆಗಳು ಕೆಲಸ ನೀಡಿದಲ್ಲಿ ಅಥವ ಅಪ್ರೆಂಟೈಸರ್ ಆಗಿ ಅವಕಾಶ ಕಲ್ಪಿಸಿದರೆ ತಿಂಗಳಿಗೆ ಒಬ್ಬ ಅಭ್ಯರ್ಥಿಗೆ ಸುಮಾರು 7 ಸಾವಿರ ರೂಪಾಯಿವರೆಗೆ ಸಂಸ್ಥೆಗಳಿಗೆ ರಿಅಂಬ್ರೈಸ್ ಮಾಡಲಾಗುವುದು ಎಂದು ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಇದೇ ಸಂಧರ್ಭದಲ್ಲಿ ಮಾಹಿತಿ ನೀಡಿದರು.

ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಮೇಲೆ ಕಾರ್ಮಿಕರಿಗೆ ಎಲ್ಲಾ ರೀತಿಯಲ್ಲಿ ಅನುಕೂಲ ಕಲ್ಪಿಸಲೆಂದು ತಾವು ಕಾರ್ಮಿಕ ಸಚಿವರಾದ ಬಳಿಕ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರಲಾಗಿದೆ. ರಾಜ್ಯದಲ್ಲಿ ಪ್ರಸಕ್ತ 91 ವರ್ಗದ ಕಾರ್ಮಿಕರಿಗೆ ಸಹಾಯ ಮಾಡಲೆಂದು ಕಾರ್ಮಿಕರನ್ನು ಗುರುತಿಸಿ ಕಾರ್ಮಿಕರ ದತ್ತಾಂಶಗಳನ್ನು ಸಂಗ್ರಹಿಸುವ ಕೆಲಸ ಚಾಲ್ತಿಯಲ್ಲಿದೆ. ಪ್ರಾರಂಭಿಕವಾಗಿ ಹೊಸಹೋಸ ಯೋಜನೆಗಳನ್ನು ಕಾರ್ಮಿಕರಿಗೆ ತರಲಾಗಿದ್ದು, ಮುಂದಿನ ದಿನಗಳಲ್ಲಿ ಇದು ಬೇರೆ ಬೇರೆ ವರ್ಗದ ಕಾರ್ಮಿಕರಿಗೂ ವಿಸ್ತರಣೆಯಾಗುವ ಸಾಧ್ಯತೆಗಳು ಇದೆ ಎಂದು ತಿಳಿಸಿದರು..

ಈಗಾಗಲೇ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಹೊಸ ಕಾರ್ಮಿಕ ಯೋಜನೆಗಳಾದ ಅಪಘಾತ ವಿಮೆ, ಆಸ್ಪತ್ರೆ ವೆಚ್ಚಕ್ಕೆ ಸಹಾಯ, ಅಪಘಾತ ಹಾಗೂ ಸಹಜ ಮರಣಕ್ಕೆ ಸಹಾಯ, ಮೃತ ಕಾರ್ಮಿಕ ಕುಟುಂಬಕ್ಕೆ ಸಹಾಯದಂತಹ ವಿಶೇಷ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಸಾರಿಗೆ ಮತ್ತು ಅದಕ್ಕೆ ಸಂಬಂಧಿಸಿದ ಕಾಮಿಕರಿಗೆ ಯೋಜನೆ ಮತ್ತು ಮಂಡಳಿ ಜಾರಿಗೆ ತರಲಾಗಿದೆ.ಸುಮಾರು 25ಲಕ್ಷ ಮಂದಿ ಇದಕ್ಕೆ ಸಂಬಂಧಿಸಿದ ಕಾರ್ಮಿಕರಿದ್ದಾರೆಂದು ಗುರುತಿಸಲಾಗಿದೆ. ಗಿಗ್ ವರ್ಕರ್ಸ್ ಗಳಿಗೆ ಪ್ರತ್ಯೇಕ ಕಾಯಿದೆ ಜಾರಿಗೆ ತರಲಾಗಿದೆ ಎಂದು ಸಚಿವ ಸಂತೋಷ್ ಲಾಡ್, ಕಾರ್ಮಿಕ ಇಲಾಖೆಯ ಯೋಜನೆಗಳ ಉದ್ದೇಶಗಳನ್ನು ಸ್ಪಷ್ಟಪಡಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಡಾ.ಕೆ.ಆನಂದ್, ನಾಗಠಾಣ ಕ್ಷೇತ್ರದ ಶಾಸಕರಾದ ಶ್ರೀ ವಿಠ್ಠಲ ಕಟಕದೋಂಡ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರಾದ ಶ್ರೀ ಸಂಗಮೇಶ ಅಪ್ಪಸಿ ಬಬಲೇಶ್ವರ, ಲಿಡ್ಕರ್ ಅಧ್ಯಕ್ಷರಾದ ಶ್ರೀ ಮುಂಡರಗಿ ನಾಗರಾಜ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಮಿಕ ವರ್ಗದ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


Share It

You cannot copy content of this page