ಸುದ್ದಿ

ರೌಡಿಶೀಟರ್ ಗಳ ಕಾಲಿಗೆ ಗುಂಡೇಟು: ಕನಕಪುರ ಪೊಲೀಸರ ಕಾರ್ಯಾಚರಣೆ

Share It

ಕನಕಪುರ: ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡು ಅಡ್ಡಾಡಡುತ್ತಿದ್ದ ರೌಡಿಶೀಟರ್ ಗಳ ಕಾಲಿಗೆ ಕನಕಪುರ ಪೊಲೀಸರು ಗುಂಡು ಹೊಡೆದು ಬಂಧಿಸಿರುವ ಘಟನೆ ನಡೆದಿದೆ.

ಬೆಂಗಳೂರು ಹೊರವಲಯದ ಕಗ್ಗಲೀಪುರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು ಪೊಲೀಸರು ಬಂಧಿಸಲು ಬಂದಾಗ ಅವರ ಮೇಲೆ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಪ್ರಯತ್ನ ನಡೆಸಿದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಇಬ್ಬರನ್ನೂ ಬಂಧಿಸಲು ಯಶಸ್ವಿಯಾಗಿದ್ದಾರೆ.

3 ದಿನಗಳ ಹಿಂದೆ ನಡೆದ ಹಲ್ಲೆ ನಡೆಸಿದ ಪ್ರಕರಣವೊಂದರಲ್ಲಿ ರೌಡಿಶೀಟರ್ ಗಳ ಮೇಲೆ ದೂರು ದಾಖಲಾಗಿತ್ತು. ಹಲ್ಲೆಯ ವೇಳೆ ಒಬ್ಬನ ಕೈ ಕಟ್ ಮಾಡಿದ್ದ ಆರೋಪಿಗಳು ಪರಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿತ್ತು. ಆದರೆ, ಪೊಲೀಸರ ಕೈಗೆ ಸಿಗದ ಆರೋಪಿಗಳು ತಪ್ಪಿಸಿಕೊಂಡಿದ್ದರು.

ಕಗ್ಗಲೀಪುರ ಬಳಿ ನಡೆದಿರುವ ಫೈರಿಂಗ್ ನಲ್ಲಿ ಹರ್ಷ ಆಲಿಯಾಸ್ ಕೈಮ , ಕರುಣೇಶ್ ಆಲಿಯಾಸ್ ಕಣ್ಣ ಎಂಬ ರೌಡಿ ಶೀಟರ್ ಗಳ ಕಾಲಿಗೆ ಗುಂಡು ತಗುಲಿದೆ. ಪೊಲೀಸ್ ಸಿಬ್ಬಂದಿ ಶಿವಕುಮಾರ್ ಗಾಯಗೊಂಡಿದ್ದಾರೆ.

ಪೊಲೀಸ್ ಇನ್ಸ್ ಪೆಕ್ಟರ್ ಮಿಥುನ್ ಶಿಲ್ಪಿ ಮತ್ತು ಪಿಎಸ್ಐ ಮನೋಹರ್ ಅವರು ಫೈರಿಂಗ್ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.


Share It

You cannot copy content of this page