ರಾಜಕೀಯ ಸುದ್ದಿ

ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡ ಗೌಡಗೆರೆ ಗ್ರಾಪಂ ಮುಖಂಡರು

Share It

ಚನ್ನರಾಯಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಮತ್ತು ಗ್ರಾಮ ಪಂಚಾಯತಿ ಹಾಲಿ ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಕಾಂಗ್ರೆಸ್ ಪಕ್ಷವನ್ನು ತೊರೆದು ಗೌಡಗೆರೆ ಗ್ರಾಮದ ಮುಖಂಡರಾದ ಪ್ರಕಾಶ್ ಮತ್ತು ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ನಟರಾಜ್ ನೇತ್ರತ್ವದಲ್ಲಿ ಶ್ರವಣಬೆಳಗೊಳ ಕ್ಷೇತ್ರದ ಶಾಸಕರಾದ ಬಾಲಕೃಷ್ಣ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡ ಮುಖಂಡರನ್ನು ಸ್ವಾಗತ ಮಾಡಿ ಮಾತನಾಡಿದ ಬಾಲಣ್ಣನವರು ನಮ್ಮ ಜೆಡಿಎಸ್ ಪಕ್ಷದ ಸಿದ್ಧಾಂತಗಳನ್ನು ಒಪ್ಪಿಕೊಂಡು ದೇವೇಗೌಡರ ನಾಯಕತ್ವ, ಕುಮಾರಸ್ವಾಮಿಯವರ ಜನಪ್ರಿಯ ಕಾರ್ಯಕ್ರಮಗಳನ್ನು ಮೆಚ್ಚಿಕೊಂಡು ಹಾಸನ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣನವರನ್ನು ಎರಡನೇ ಬಾರಿಗೆ ಸಂಸತ್ ಸದಸ್ಯರಾಗಿ ಆಯ್ಕೆ ಮಾಡಬೇಕು ಎಂಬ ಉದ್ದೇಶದಿಂದ ಈ ದಿನ ಗೌಡಗೆರೆಯ ಹಿರಿಯ ನಾಯಕರಾದ ಬೋರೇಗೌಡನವರ ನಾಯಕತ್ವದಲ್ಲಿ ನೂರಾರು ಸಂಖ್ಯೆಯ ಮುಖಂಡರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ನಮಗೆ ಆನೆ ಬಲಬಂದಂತಾಗಿದೆ ಎಂದರು, ಈ ದಿನ ಪಕ್ಷಕ್ಕೆ ಸೇರ್ಪಡೆಗೊಂಡ ಎಲ್ಲಾ ಮುಖಂಡರನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಹೋಗುತ್ತೇವೆ ಎಂದು ಭರವಸೆ ನೀಡಿದರು,

ನಮ್ಮ ಜೆಡಿಎಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಅಭಿವೃದ್ಧಿಯ ಯೋಜನೆಗಳನ್ನು ಮನದಟ್ಟು ಮಾಡಿಕೊಂಡು ಈ ದಿನ ನೂರಾರು ಸಂಖ್ಯೆಯಲ್ಲಿ ಮುಖಂಡರುಗಳು ಹಲವಾರು ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವುದು ಪ್ರಜ್ವಲ್ ರೇವಣ್ಣನವರ ಗೆಲುವಿಗೆ ಮುನ್ಸೂಚನೆಯಾಗಿದೆ ಎಂದು ಹೇಳಿದರು, ಗೌಡಗೆರೆ ಗ್ರಾಮಸ್ಥರ ಬೇಡಿಕೆಯಾದಂತಹ ಪ್ಲೇ ಓವರ್ ರಸ್ತೆಯ ಕಾಮಗಾರಿಯನ್ನು ಲೋಕಸಭಾ ಚುನಾವಣೆ ಮುಗಿದ ತಕ್ಷಣ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಏಪ್ರಿಲ್ 19 19 ರಂದು ಗೌಡಿಗೆರೆಯಲ್ಲಿ ನಡೆಯಲಿರುವ ಎನ್ ಡಿ ಎ ಪಕ್ಷದ ಮೈತ್ರಿ ಅಭ್ಯರ್ಥಿಯ ಪರವಾಗಿ ಚುನಾವಣಾ ಪ್ರಚಾರದಲ್ಲಿ ಗೌಡಗೆರೆ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಮುಖಂಡರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡ ಗೌಡಗೆರೆ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ನಟರಾಜ್ ಮಾತನಾಡಿ ಕಳೆದ 10 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಮುಖಂಡರಾಗಿ ಬಾಲಕೃಷ್ಣರ ವಿರೋಧವಾಗಿ ಕೆಲಸ ಮಾಡಿದ್ದರು ಸಹ ಇದನ್ನು ಯಾವುದನ್ನು ಮನದಲ್ಲಿಟ್ಟುಕೊಳ್ಳದೆ ನಮ್ಮ ಎಲ್ಲಾ ಕೆಲಸ ಕಾರ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ಮಾಡಿಕೊಟ್ಟಿರುತ್ತಾರೆ ಹಾಗೂ ಶಾಸಕರ ಮನೆಗೆ ಬಂದು ನಮ್ಮ ಸಮಸ್ಯೆ ಹೇಳಿದ ಸಂದರ್ಭದಲ್ಲಿ ಯಾವುದೇ ಕಾರಣದಲ್ಲೂ ನಮ್ಮನ್ನು ಬರಿಗೈಯಲ್ಲಿ ಕಳಿಸಿರುವುದಿಲ್ಲ ನಮ್ಮೆಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ ನಮ್ಮನ್ನು ಉತ್ತಮ ರೀತಿ ನಡೆಸಿಕೊಂಡಿರುತ್ತಾರೆ. ಇಂಥಹ ಜನಪ್ರಿಯ ಶಾಸಕರಾದ ಸಿಎನ್ ಬಾಲಕೃಷ್ಣ ಅವರ ಅಭಿವೃದ್ಧಿ ಯೋಜನೆಗಳನ್ನು ಕಣ್ಣಾರೆ ಕಂಡು ಹಾಗೂ ಅವರಲ್ಲಿರುವ ಜನಪರವಾದ ಆಲೋಚನೆಗಳನ್ನು ಮನಗೊಂಡು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇವೆ ಶಾಸಕ ಸಿಎನ್ ಬಾಲಕೃಷ್ಣ ಅವರು ಎಲ್ಲಿವರೆಗೂ ರಾಜಕಾರಣದಲ್ಲಿ ಮುಂದುವರೆಯುತ್ತಾರೋ ಅಲ್ಲಿವರೆಗೂ ಬಾಲಕೃಷ್ಣ ಅವರ ಬೆಂಬಲಿಗರಾಗಿ ಅವರ ಜೊತೆಯಲ್ಲೇ ಇರುತ್ತೇವೆ ಎಂದು ಹೇಳಿದರು.

ಗೌಡಗೆರೆ ಪ್ರಕಾಶ್ ಮಾತನಾಡಿ ಸಿಎನ್ ಬಾಲಕೃಷ್ಣ ಅವರ ನಿರಂತರ ಜನಸೇವೆಯನ್ನು ನೋಡಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿ ಪ್ರಜ್ವಲ್ ರೇವಣ್ಣನವರನ್ನು ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಲು ಶ್ರಮಿಸುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಶಾಸಕರಾದ ಸಿಎನ್ ಬಾಲಕೃಷ್ಣ,ಜೆಡಿಎಸ್ ಪಕ್ಷದ ಮುಖಂಡರಾದ ಕಗ್ಗೆರೆ ನಾಗೇಂದ್ರಬಾಬು, ಬೋರೇಗೌಡ್, ಗೌಡಗೆರೆ ಪ್ರಕಾಶ್, ಗೌಡಗೆರೆ ನಟರಾಜ್, ಶ್ರೀನಿವಾಸ್, ಲೋಕಿ ,ರಾಜೇಶ್, ಎಚ್ ಡಿ ಕುಮಾರ್, ಮಂಜು ,ಅವಿನಾಶ್, ಅಣ್ಣಪ್ಪ, ಕಾರ್ತಿಕ್ ,ವಸಂತ್ ,ವೆಂಕಟೇಶ್, ರಮೇಶ್ ನಾಯಕ್, ಸತೀಶ್ ಸೇರಿದಂತೆ ಇತರರು ಹಾಜರಿದ್ದರು.


Share It

You cannot copy content of this page