ಅಪರಾಧ ರಾಜಕೀಯ ಸುದ್ದಿ

ಮೂಡಾ ಹಗರಣ ನ್ಯಾಯಾಂಗ ತನಿಖೆಗೆ ಆದೇಶ

Share It

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ಆರೋಪ ಕಾಎಳಿಬಂದಿರುವ ಮೂಡಾ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ ಸರಕಾರ ಆದೇಶ ಹೊರಡಿಸಿದೆ.

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತ್ರತ್ವದಲ್ಲಿ ಆಯೋಗ ರಚನೆ ಮಾಡಲಾಗಿದೆ. ಈ ಆಯೋಗ ಆರು ತಿಂಗಳಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.

ಬೃಹತ್ ಪ್ರತಿಭಟನೆ ಮೂಲಕ ಸರಕಾರ ಹಣಿಯಲು ಸಜ್ಜಾಗಿದ್ದ ಬಿಜೆಪಿ, ನಾಳೆಯಿಂದ ವಿಧಾನಸಭಾ ಅಧಿವೇಶನದಲ್ಲಿ ಸರಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿತ್ತು. ಇದೀಗ ತನಿಖೆಗೆ ಆದೇಶಿಸುವ ಮೂಲಕ ಸರಕಾರ ಸಮರ್ಥನೆಗೆ ಸಜ್ಜಾಗಿದೆ.


Share It

You cannot copy content of this page