ಕೊಲ್ಕತ್ತಾ: ಬಾಂಗ್ಲಾ ಗಡಿಯಲ್ಲಿ ನುಸುಳುವಿಕೆಯನ್ನು ತಡೆಯಲು ಬೇಲೆ ನಿರ್ಮಾಣ ಮಾಡುವುದಕ್ಕೆ ಬೇಕಿರುವ ಭೂಮಿಯನ್ನು ಹಸ್ತಾಂತರ ಮಾಡಲು ಪಶ್ಚಿಮ ಬಂಗಾಳ ಸರಕಾರ ತೀರ್ಮಾನಿಸಿದೆ.
ಅಧಿಕಾರ ವಹಿಸಿಕೊಂಡ ಎರಡೇ ದಿನದಲ್ಲಿ ಬಿಜೆಪಿಯ ಸಿಎಂ ಸುದೇಂದು ಅಧಿಕಾರಿ ಈ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ಗಡಿಯಲ್ಲಿ ಬೇಲಿಯಿಲ್ಲದ ಕಾರಣಕ್ಕೆ ಬಾಂಗ್ಲಾದಿಂದ ಲಕ್ಷಾಂತರ ಜನರು ಅಕ್ರಮವಾಗಿ ಭಾರತಕ್ಕೆ ಬರುತ್ತಿದ್ದಾರೆ. ಇದರ ತಡೆ ನಮ್ಮ ಹೊಣೆಯಾಗಿದೆ ಎಂದಿದ್ದಾರೆ.
ಈ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ಗಡಿ ಪ್ರದೇಶದ ಸಂಪೂರ್ಣ ಭಾರತೀಯ ಗಡಿ ಭದ್ರತಾ ಪಡೆಗೆ ವಹಿಸಿಕೊಡಲು ತೀರ್ಮಾನಿಸಲಾಗಿದೆ. ಜತೆಗೆ, ಗಡಿಯಲ್ಲಿ ಬೇಲೆ ನಿರ್ಮಾಣಕ್ಕೆ ಅಗತ್ಯವಿರುವ ಬೇಲಿಯನ್ನು ಹಸ್ತಾಂತರ ಮಾಡಲು ತೀರ್ಮಾನಿಸಲಾಗಿದೆ.

