ಬೆಂಗಳೂರು: ರಾಜ್ಯದ ಹಲವೆಡೆ ಜೂನ್ 13ರ ವರೆಗೂ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಜೊತೆಗೆ ಗುಡುಗು ಸಹಿತ ಬಿರುಗಾಳಿ ಬೀಸಲಿದೆ. ರಾಜ್ಯದಲ್ಲಿ ಇಂದು ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು ಕರಾವಳಿ ಜಿಲ್ಲೆ ಮತ್ತು ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ಸೇರಿ 5 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ದಕ್ಷಿಣ ಕನ್ನಡ, ಬಾಗಲಕೋಟೆ, ಗದಗ ಸೇರಿ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರೀ ಗಾಳಿಯೊಂದಿಗೆ(ಗಂಟೆಗೆ 40-50 ಕಿಮೀ ) ತುಂಬಾ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದ ಭಾರೀ ಮಳೆಯೊಂದಿಗೆ ಪ್ರತ್ಯೇಕ ಭಾರೀ ಅತಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬಾಗಲಕೋಟೆ, ಹಾವೆೇರಿ, ಕಲಬುರಗಿ, ವಿಜಯಪುರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ / ಗುಡುಗು ಸಹಿತ ಗಾಳಿ (ಗಂಟೆಗೆ 30-40 ಕಿಮೀ) ಸಂಭವವಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಚಂಡಮಾರುತದ ಹವಾಮಾನವು ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೆೇಗದಲ್ಲಿ 65 ಕಿ.ಮೀ ವರೆಗೆ ಬೀಸುವ ಗಾಳಿಯೊಂದಿಗೆ ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಮಿಂಚು ಮತ್ತು ಗುಡುಗು ಸಿಡಿಲಿನಿಂದ ಎಚ್ಚರವಾಗಿರಿ. ಸುರಕ್ಷತಾ ಕ್ರಮಗಳನ್ನು ತಿಳಿಯಿರಿ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಟ್ವೀಟ್ ಮೂಲಕ ತಿಳಿಸಿದೆ.

