ಬೆಂಗಳೂರು: ಡಿ.ಜೆ.ಹಳ್ಳಿಯ ಕುದುರೆಯೊಂದರಲ್ಲಿ ಗ್ಲಾಂಡಸರ್್ ರೋಗೋದ್ರೇಕ ದೃಢಪಟ್ಟಿರುವುದರಿಂದ ಮೋದಿ ರಸ್ತೆಯ ಡಿ.ಜೆ.ಹಳ್ಳಿ ಕೇಂದ್ರ ಸ್ಥಾನದಿಂದ ಸುತ್ತಲಿನ 5 ಕಿ.ಮೀ. ವ್ಯಾಪ್ತಿ ಪ್ರದೇಶವನ್ನು ರೋಗಪೀಡಿತ ವಲಯ ಎಂದು ಘೋಷಣೆ ಮಾಡಲಾಗಿದೆ.
5 ರಿಂದ 25 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಜಾಗೃತ ವಲಯ ಎಂದು ಪಶುಸಂಗೋಪನೆ ಹಾಗೂ ಹೈನುಗಾರಿಕೆ ಇಲಾಖೆ ಘೋಷಿಸಿದೆ. ಈ ಪ್ರದೇಶದ ಒಳಗೆ ಮತ್ತು ಹೊರಗೆ ಕುದುರೆ, ಕತ್ತೆ ಮತ್ತು ಹೇಸರಗತ್ತೆಗಳ ಚಲನವಲನವನ್ನು ನಿಬರ್ಂಧಿಸಲಾಗಿದೆ. ‘ಪ್ರಾಣಿಗಳಲ್ಲಿ ಸೋಂಕುಕಾರಕ ಮತ್ತು ಸಾಂಕ್ರಾಮಿಕ ರೋಗಗಳ ಪ್ರತಿಬಂಧಕ ಮತ್ತು ನಿಯಂತ್ರಣ ಅಧಿನಿಯಮ 2009’ರ ಕಲಂ-6 ಅಡಿ ಈ ಆದೇಶ ಹೊರಡಿಸಲಾಗಿದೆ. ಭಾರತ ಸಕರ್ಾರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ ಹೊರಡಿಸಿರುವ ಗ್ಲಾಂಡಸರ್್ ನಿಯಂತ್ರಣ ಹಾಗೂ ನಿಮರ್ೂಲನೆ ರಾಷ್ಟ್ರೀಯ ಕ್ರಿಯಾ ಯೋಜನೆ-2019 ರ ಅಧ್ಯಾಯ 4.1 ರ ಪ್ರಕಾರ ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರು ಉತ್ತರ ತಾಲೂಕಿನ ಡಿ.ಜೆ.ಹಳ್ಳಿಯ ಮೋದಿ ರಸ್ತೆಯಲ್ಲಿ ವಾಸಿಸುತ್ತಿರುವ ಖಲೀದ್ ಷರೀಫ್ ಬಿನ್ ಎ.ಜೆ. ಷರೀಫ್ ಎಂಬುವರ ಮಾಲೀಕತ್ವದ ಕುದುರೆಯಲ್ಲಿ ರೋಗೋದ್ರೇಕ ಕಾಣಿಸಿಕೊಂಡಿದೆ. ಈ ಪ್ರದೇಶದ ಸುತ್ತಲಿನ (ರೇಡಿಯಸ್) 5 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ‘ರೋಗ ಪೀಡಿತ ವಲಯ’ ಹಾಗೂ 5 ರಿಂದ 25 ಕಿ.ಮೀ.ಗಳ ವ್ಯಾಪ್ತಿಯ (ರೇಡಿಯಸ್/ ತ್ರಿಜ್ಯ) ಪ್ರದೇಶವನ್ನು ‘ಜಾಗೃತ ವಲಯ’ ಎಂದು ಘೋಷಣೆ ಮಾಡಲಾಗಿದೆ ಎಂದು ಪಶುಸಂಗೋಪನಾ ಹಾಗೂ ಹೈನುಗಾರಿಕೆ ಇಲಾಖೆಯ ಪ್ರಕಟಣೆ ತಿಳಿಸಿದೆ.